<p>ಬೆಂಗಳೂರು: ‘ಹೈಕಮಾಂಡ್ ಹೇಳಿದವರು ಮುಖ್ಯಮಂತ್ರಿ ಆಗುತ್ತಾರೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೊ ಅವರಿಗೆ ಜೈ ಹೇಳುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ಕುರಿತ ಗೊಂದಲವನ್ನು ಹೈಕಮಾಂಡ್ ಆದಷ್ಟು ಬೇಗ ಪರಿಹರಿಸಬೇಕು’ ಎಂದರು.</p>.<p>‘ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು’ ಎಂಬ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿ, ‘ಈ ರೀತಿ ನಾನು ಬೇಡಿಕೆ ಇಟ್ಟಿಲ್ಲ. ಸಚಿವನಾಗಿ ಎರಡು ವರ್ಷ ಕೆಲಸ ಮಾಡುತ್ತೇನೆ. ಮುಂದೆ ನೋಡೋಣ’ ಎಂದರು.</p>.<p>‘ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿಯೂ ನಾನು ಇಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ನಿಜ. ಆದಷ್ಟು ಬೇಗ ಹೈಕಮಾಂಡ್ ಇದಕ್ಕೆ ಇತಿಶ್ರೀ ಹೇಳಬೇಕು ಎಂಬುದು ನಮ್ಮ ಆಶಯ’ ಎಂದರು.</p>.<p>ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಗುತ್ತಿಗೆದಾರರದ್ದು ಆರೋಪ ಅಲ್ಲ, ಬೇಡಿಕೆ. ಲೋಕೋಪಯೋಗಿ ಇಲಾಖೆಯಿಂದಲೂ ಅವರಿಗೆ ಬಿಲ್ ಕೊಡಬೇಕು. ನಾವು ಆದ್ಯತೆ ಮೇಲೆ ಕೊಡುತ್ತಿದ್ದೇವೆ’ ಎಂದರು.</p>.<p>‘ಬಿಲ್ ಕೊಡದಿದ್ದರೆ ಕಾಮಗಾರಿ ತೆಗೆದುಕೊಳ್ಳುವುದಿಲ್ಲ’ ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, ‘ಕಾಮಗಾರಿ ತೆಗೆದುಕೊಳ್ಳದಿದ್ದರೆ ಅವರಿಗೇ ನಷ್ಟ. ಹೊರಗಿನವರು ಟೆಂಡರ್ನಲ್ಲಿ ಭಾಗವಹಿಸಿದರೆ ಯಾರಿಗೆ ನಷ್ಟ ಹೇಳಿ’ ಎಂದರು.</p>.<p>‘ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪರಿಶಿಷ್ಟ ಜಾತಿ, ಪಂಗಡದ ಉದ್ಯಮಿಗಳು ನನ್ನನ್ನು ಭೇಟಿ ಮಾಡಿದ್ದರು. ಅವರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಹೈಕಮಾಂಡ್ ಹೇಳಿದವರು ಮುಖ್ಯಮಂತ್ರಿ ಆಗುತ್ತಾರೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೊ ಅವರಿಗೆ ಜೈ ಹೇಳುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ಕುರಿತ ಗೊಂದಲವನ್ನು ಹೈಕಮಾಂಡ್ ಆದಷ್ಟು ಬೇಗ ಪರಿಹರಿಸಬೇಕು’ ಎಂದರು.</p>.<p>‘ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು’ ಎಂಬ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿ, ‘ಈ ರೀತಿ ನಾನು ಬೇಡಿಕೆ ಇಟ್ಟಿಲ್ಲ. ಸಚಿವನಾಗಿ ಎರಡು ವರ್ಷ ಕೆಲಸ ಮಾಡುತ್ತೇನೆ. ಮುಂದೆ ನೋಡೋಣ’ ಎಂದರು.</p>.<p>‘ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ನಲ್ಲಿಯೂ ನಾನು ಇಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ನಿಜ. ಆದಷ್ಟು ಬೇಗ ಹೈಕಮಾಂಡ್ ಇದಕ್ಕೆ ಇತಿಶ್ರೀ ಹೇಳಬೇಕು ಎಂಬುದು ನಮ್ಮ ಆಶಯ’ ಎಂದರು.</p>.<p>ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಗುತ್ತಿಗೆದಾರರದ್ದು ಆರೋಪ ಅಲ್ಲ, ಬೇಡಿಕೆ. ಲೋಕೋಪಯೋಗಿ ಇಲಾಖೆಯಿಂದಲೂ ಅವರಿಗೆ ಬಿಲ್ ಕೊಡಬೇಕು. ನಾವು ಆದ್ಯತೆ ಮೇಲೆ ಕೊಡುತ್ತಿದ್ದೇವೆ’ ಎಂದರು.</p>.<p>‘ಬಿಲ್ ಕೊಡದಿದ್ದರೆ ಕಾಮಗಾರಿ ತೆಗೆದುಕೊಳ್ಳುವುದಿಲ್ಲ’ ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, ‘ಕಾಮಗಾರಿ ತೆಗೆದುಕೊಳ್ಳದಿದ್ದರೆ ಅವರಿಗೇ ನಷ್ಟ. ಹೊರಗಿನವರು ಟೆಂಡರ್ನಲ್ಲಿ ಭಾಗವಹಿಸಿದರೆ ಯಾರಿಗೆ ನಷ್ಟ ಹೇಳಿ’ ಎಂದರು.</p>.<p>‘ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪರಿಶಿಷ್ಟ ಜಾತಿ, ಪಂಗಡದ ಉದ್ಯಮಿಗಳು ನನ್ನನ್ನು ಭೇಟಿ ಮಾಡಿದ್ದರು. ಅವರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>