<p><strong>ನವದೆಹಲಿ</strong>: ‘ಉಚಿತ ಕೊಡುಗೆಗಳನ್ನು ಕರ್ನಾಟಕದಲ್ಲಿ ಮಾತ್ರ ನೀಡುತ್ತಿಲ್ಲ. ಈ ಯೋಜನೆಗಳನ್ನು ಮರು ಪರಿಶೀಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಸಲಹೆ ಬಗ್ಗೆ ಎಲ್ಲರೂ ಸೇರಿ ನಿರ್ಧಾರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿಗಳ ಜತೆಗೂ ಚರ್ಚೆ ನಡೆಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇದೆ ಎಂದು ಹೇಳಿದ್ದೇನೆ. ಸರ್ಕಾರ ಬದಲಾದರೂ ಭ್ರಷ್ಟಾಚಾರ ಹಾಗೆಯೇ ಇರುತ್ತದೆ. ಗುತ್ತಿಗೆದಾರರ ವಿಚಾರಕ್ಕೆ ಆ ಹೇಳಿಕೆ ನೀಡಿದ್ದೆ. ಯಾವುದೇ ನಿರ್ದಿಷ್ಟ ವಿಚಾರಕ್ಕೆ ಈ ಹೇಳಿಕೆ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ನಲ್ಲಿ ವಕೀಲರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಅಧ್ಯಯನ ಮಾಡಲು ನಿಯೋಗ ಬಂದಿದ್ದೇವೆ. ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ವಕೀಲರ ಸಲಹೆ ಪಡೆದು ರಾಜ್ಯದಲ್ಲಿ ವಕೀಲರಿಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲ ಕಡೆಗೂ ಮಾದರಿಯಾಗುವಂತೆ ಚೇಂಬರ್ ವ್ಯವಸ್ಥೆ ಮಾಡಲಾಗುವುದು’ ಎಂದರು. </p>.<p>‘ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ಇಲಾಖಾ ಕೆಲಸದ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಉಚಿತ ಕೊಡುಗೆಗಳನ್ನು ಕರ್ನಾಟಕದಲ್ಲಿ ಮಾತ್ರ ನೀಡುತ್ತಿಲ್ಲ. ಈ ಯೋಜನೆಗಳನ್ನು ಮರು ಪರಿಶೀಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಸಲಹೆ ಬಗ್ಗೆ ಎಲ್ಲರೂ ಸೇರಿ ನಿರ್ಧಾರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿಗಳ ಜತೆಗೂ ಚರ್ಚೆ ನಡೆಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇದೆ ಎಂದು ಹೇಳಿದ್ದೇನೆ. ಸರ್ಕಾರ ಬದಲಾದರೂ ಭ್ರಷ್ಟಾಚಾರ ಹಾಗೆಯೇ ಇರುತ್ತದೆ. ಗುತ್ತಿಗೆದಾರರ ವಿಚಾರಕ್ಕೆ ಆ ಹೇಳಿಕೆ ನೀಡಿದ್ದೆ. ಯಾವುದೇ ನಿರ್ದಿಷ್ಟ ವಿಚಾರಕ್ಕೆ ಈ ಹೇಳಿಕೆ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ನಲ್ಲಿ ವಕೀಲರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಅಧ್ಯಯನ ಮಾಡಲು ನಿಯೋಗ ಬಂದಿದ್ದೇವೆ. ಇಲ್ಲಿನ ವ್ಯವಸ್ಥೆ ಪರಿಶೀಲಿಸಿ, ವಕೀಲರ ಸಲಹೆ ಪಡೆದು ರಾಜ್ಯದಲ್ಲಿ ವಕೀಲರಿಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲ ಕಡೆಗೂ ಮಾದರಿಯಾಗುವಂತೆ ಚೇಂಬರ್ ವ್ಯವಸ್ಥೆ ಮಾಡಲಾಗುವುದು’ ಎಂದರು. </p>.<p>‘ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ಇಲಾಖಾ ಕೆಲಸದ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>