<p><strong>ದಾವಣಗೆರೆ:</strong> ವೈಯಕ್ತಿವಾಗಿ ನನಗೆ ಹೋಮ-ಹವನದ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಇಷ್ಟವಾದ್ದರಿಂದ ಅವರು ಮಾಡಿಕೊಂಡಿದ್ದಾರೆ. ನಾನು ಬೇರೆ ಕೆಲಸದ ನಿಮಿತ್ತ ಅಲ್ಲಿಗೆ ಹೋಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.</p>.<p>ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಹೋಮಕ್ಕೆ ತೆರಳದೇ ಇರುವುದರ ಬಗ್ಗೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಲು ಚಿಂತನೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/stories/stateregional/dkshivakumar-kpcc-prsident-736588.html" target="_blank">ಡಿ.ಕೆ.ಶಿವಕುಮಾರ್<strong></strong>ಪದಗ್ರಹಣಕ್ಕೂ ಮುನ್ನ ಹೋಮ</a></p>.<p>ಈಗಾಗಲೇ ಬಿಜೆಪಿಯಲ್ಲಿ ಮೂರು ಗುಂಪುಗಳಾಗಿವೆ. ಈಗ ಮತ್ತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಇನ್ನೊಂದು ಗುಂಪು ಮಾಡುವ ಪ್ರಯತ್ನ ಇರಬಹುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ವೈಯಕ್ತಿವಾಗಿ ನನಗೆ ಹೋಮ-ಹವನದ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಇಷ್ಟವಾದ್ದರಿಂದ ಅವರು ಮಾಡಿಕೊಂಡಿದ್ದಾರೆ. ನಾನು ಬೇರೆ ಕೆಲಸದ ನಿಮಿತ್ತ ಅಲ್ಲಿಗೆ ಹೋಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.</p>.<p>ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಹೋಮಕ್ಕೆ ತೆರಳದೇ ಇರುವುದರ ಬಗ್ಗೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಲು ಚಿಂತನೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/stories/stateregional/dkshivakumar-kpcc-prsident-736588.html" target="_blank">ಡಿ.ಕೆ.ಶಿವಕುಮಾರ್<strong></strong>ಪದಗ್ರಹಣಕ್ಕೂ ಮುನ್ನ ಹೋಮ</a></p>.<p>ಈಗಾಗಲೇ ಬಿಜೆಪಿಯಲ್ಲಿ ಮೂರು ಗುಂಪುಗಳಾಗಿವೆ. ಈಗ ಮತ್ತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಇನ್ನೊಂದು ಗುಂಪು ಮಾಡುವ ಪ್ರಯತ್ನ ಇರಬಹುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>