‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ’
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಭಾನುವಾರ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಂಡ ಅಭಿಮಾನಿಗಳು, ‘ಮುಂದಿನ ಸಿ.ಎಂ’ ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಕಲ್ಯಾಣ ಮಂಟಪದ ಆವರಣದಲ್ಲಿ ‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ ಜಾರಕಿಹೊಳಿ’ ಎಂಬ ನಾಮಫಲಕಗಳು ರಾರಾಜಿಸಿದವು.