<p><strong>ಬೆಂಗಳೂರು</strong>: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಈ ಕುರಿತು ಚರ್ಚೆ ಆರಂಭವಾದ ಬಳಿಕ ನನ್ನ ಅಭಿಪ್ರಾಯ ಏನೆಂಬುದನ್ನು ಹೇಳುತ್ತೇನೆ’ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಸೋನಿಯಾ ಮತ್ತು ರಾಹುಲ್ಗಾಂಧಿ ಜತೆ ಚರ್ಚಿಸಿ ಹಿಂದಿರುಗಿದ ಬಳಿಕವೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದರು.</p>.<p>ಹೊಸ ಸರ್ಕಾರದ ಸಚಿವರು, ಉಪಮುಖ್ಯಮಂತ್ರಿಗಳ ಸಂಖ್ಯೆಯ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಶನಿವಾರ ಸ್ಪಷ್ಟತೆ ಸಿಗಬಹುದು ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ವಿರುದ್ಧ ಸಹಿ ಸಂಗ್ರಹ ಮಾಡಲಾಗಿದೆ ಎಂಬುದು ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ಗಳಿಗೆ ಮಹತ್ವ ನೀಡಬೇಕಾಗಿಲ್ಲ. ಯಾವ ಸಹಿಯೂ ಹೈಕಮಾಂಡ್ಗೆ ಹೋಗಿಲ್ಲ. 37 ಶಾಸಕರು ಸಿದ್ದರಾಮಯ್ಯ ವಿರುದ್ಧ ಸಹಿ ಹಾಕಿದ್ರೆ 100 ಮಂದಿ ಉಳಿದವರು ಎಲ್ಲಿಗೆ ಹೋದರು? ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಒಪ್ಪಂದದ ಪ್ರಕಾರ ಆಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಯಾವಾಗಲಾದರೂ ಕೆಳಗಿಳಿಯಲೇಬೇಕಿತ್ತು. ಹಿಂದೆ ದೇವರಾಜ ಅರಸು, ಬಂಗಾರಪ್ಪ ಎಲ್ಲರೂ ಇಳಿದಿದ್ದರು’ ಎಂದು ಜಾರಕಿಹೊಳಿ ತಿಳಿಸಿದರು.</p>.<p><strong>ಸಿದ್ದರಾಮಯ್ಯ ಮಾದರಿ ಸಮಾಜವಾದಿ: ದಿನೇಶ್ ಗುಂಡೂರಾವ್ </strong></p><p>‘ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ನೈಜ ಸಮಾಜವಾದಿಯಾಗಿ ತೋರಿಸಿದ ಅವರ ನಡೆ ನಮಗೆಲ್ಲರಿಗೂ ಸದಾ ಮಾದರಿ’ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. </p><p> ‘ಕೋಮುವಾದಿಗಳ ವಿರುದ್ಧ ಎಂದೂ ರಾಜಿ ಮಾಡಿಕೊಳ್ಳದ ಅವರ ಗಟ್ಟಿ ನಿಲುವುಗಳು ಹಾಗೂ ಜನಾನುರಾಗಿ ಯಾಗಿ 'ಪಂಚ ಗ್ಯಾರಂಟಿ' ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಾರ್ಯವೈಖರಿ ಅವರ 'ನುಡಿದಂತೆ ನಡೆಯುವ' ಗುಣಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>‘ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಗಳು ಸಕಾಲದಲ್ಲಿ ದೊರೆಯಬೇಕೆಂಬ ನಿಟ್ಟಿನಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಆರೋಗ್ಯ ಇಲಾಖೆ ತಂದ ಹೆಮ್ಮೆಯ '108 ಕೇಂದ್ರೀಕೃತ ಕಮಾಂಡ್ ಕಂಟ್ರೋಲ್ ಸೆಂಟರ್' ಅನ್ನು ಇತ್ತೀಚೆಗಷ್ಟೇ ಉದ್ಘಾಟಿಸಿದ್ದರು. ಅದುವೇ ಅವರು ಮುಖ್ಯಮಂತ್ರಿಯಾಗಿ ಭಾಗವಹಿಸಿದ ಕೊನೆಯ ಅಧಿಕೃತ ಸಾರ್ವಜನಿಕ ಕಾರ್ಯಕ್ರಮ ಎಂಬುದು ಈಗ ಭಾವನಾತ್ಮಕವಾಗಿ ಕಾಡುತ್ತಿದೆ’ ಎಂದಿದ್ದಾರೆ. </p><p>‘ಕರ್ನಾಟಕದಲ್ಲಿ ಶಾಂತಿ ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ಆಡಳಿತ ನಿರಂತರವಾಗಿ ಮುಂದುವರಿಯಬೇಕಾದರೆ ಸಿದ್ದರಾಮಯ್ಯ ಅವರು ರಾಜೀನಾಮೆಯ ನಂತರವೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವ ಅಗತ್ಯವಿದೆ’ ಎಂದು ದಿನೇಶ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಈ ಕುರಿತು ಚರ್ಚೆ ಆರಂಭವಾದ ಬಳಿಕ ನನ್ನ ಅಭಿಪ್ರಾಯ ಏನೆಂಬುದನ್ನು ಹೇಳುತ್ತೇನೆ’ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಸೋನಿಯಾ ಮತ್ತು ರಾಹುಲ್ಗಾಂಧಿ ಜತೆ ಚರ್ಚಿಸಿ ಹಿಂದಿರುಗಿದ ಬಳಿಕವೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದರು.</p>.<p>ಹೊಸ ಸರ್ಕಾರದ ಸಚಿವರು, ಉಪಮುಖ್ಯಮಂತ್ರಿಗಳ ಸಂಖ್ಯೆಯ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಶನಿವಾರ ಸ್ಪಷ್ಟತೆ ಸಿಗಬಹುದು ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ವಿರುದ್ಧ ಸಹಿ ಸಂಗ್ರಹ ಮಾಡಲಾಗಿದೆ ಎಂಬುದು ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ಗಳಿಗೆ ಮಹತ್ವ ನೀಡಬೇಕಾಗಿಲ್ಲ. ಯಾವ ಸಹಿಯೂ ಹೈಕಮಾಂಡ್ಗೆ ಹೋಗಿಲ್ಲ. 37 ಶಾಸಕರು ಸಿದ್ದರಾಮಯ್ಯ ವಿರುದ್ಧ ಸಹಿ ಹಾಕಿದ್ರೆ 100 ಮಂದಿ ಉಳಿದವರು ಎಲ್ಲಿಗೆ ಹೋದರು? ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಒಪ್ಪಂದದ ಪ್ರಕಾರ ಆಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಯಾವಾಗಲಾದರೂ ಕೆಳಗಿಳಿಯಲೇಬೇಕಿತ್ತು. ಹಿಂದೆ ದೇವರಾಜ ಅರಸು, ಬಂಗಾರಪ್ಪ ಎಲ್ಲರೂ ಇಳಿದಿದ್ದರು’ ಎಂದು ಜಾರಕಿಹೊಳಿ ತಿಳಿಸಿದರು.</p>.<p><strong>ಸಿದ್ದರಾಮಯ್ಯ ಮಾದರಿ ಸಮಾಜವಾದಿ: ದಿನೇಶ್ ಗುಂಡೂರಾವ್ </strong></p><p>‘ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ನೈಜ ಸಮಾಜವಾದಿಯಾಗಿ ತೋರಿಸಿದ ಅವರ ನಡೆ ನಮಗೆಲ್ಲರಿಗೂ ಸದಾ ಮಾದರಿ’ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. </p><p> ‘ಕೋಮುವಾದಿಗಳ ವಿರುದ್ಧ ಎಂದೂ ರಾಜಿ ಮಾಡಿಕೊಳ್ಳದ ಅವರ ಗಟ್ಟಿ ನಿಲುವುಗಳು ಹಾಗೂ ಜನಾನುರಾಗಿ ಯಾಗಿ 'ಪಂಚ ಗ್ಯಾರಂಟಿ' ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಾರ್ಯವೈಖರಿ ಅವರ 'ನುಡಿದಂತೆ ನಡೆಯುವ' ಗುಣಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p><p>‘ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಗಳು ಸಕಾಲದಲ್ಲಿ ದೊರೆಯಬೇಕೆಂಬ ನಿಟ್ಟಿನಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಆರೋಗ್ಯ ಇಲಾಖೆ ತಂದ ಹೆಮ್ಮೆಯ '108 ಕೇಂದ್ರೀಕೃತ ಕಮಾಂಡ್ ಕಂಟ್ರೋಲ್ ಸೆಂಟರ್' ಅನ್ನು ಇತ್ತೀಚೆಗಷ್ಟೇ ಉದ್ಘಾಟಿಸಿದ್ದರು. ಅದುವೇ ಅವರು ಮುಖ್ಯಮಂತ್ರಿಯಾಗಿ ಭಾಗವಹಿಸಿದ ಕೊನೆಯ ಅಧಿಕೃತ ಸಾರ್ವಜನಿಕ ಕಾರ್ಯಕ್ರಮ ಎಂಬುದು ಈಗ ಭಾವನಾತ್ಮಕವಾಗಿ ಕಾಡುತ್ತಿದೆ’ ಎಂದಿದ್ದಾರೆ. </p><p>‘ಕರ್ನಾಟಕದಲ್ಲಿ ಶಾಂತಿ ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ಆಡಳಿತ ನಿರಂತರವಾಗಿ ಮುಂದುವರಿಯಬೇಕಾದರೆ ಸಿದ್ದರಾಮಯ್ಯ ಅವರು ರಾಜೀನಾಮೆಯ ನಂತರವೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವ ಅಗತ್ಯವಿದೆ’ ಎಂದು ದಿನೇಶ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>