<p><strong>ಬೆಂಗಳೂರು</strong>: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಸೇರಿದ ₹64 ಕೋಟಿಯಷ್ಟು ಮಾರುಕಟ್ಟೆ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಗೋವಾದ ವಾಸ್ಕೋಡಗಾಮಾದ ‘ಅವರ್ ಲೇಡಿ ಮರ್ಸಸ್’ ವಾಣಿಜ್ಯ ಸಂಕೀರ್ಣ, ದಕ್ಷಿಣ ಗೋವಾದ ಮರ್ಮಗಾವೊ ತಾಲ್ಲೂಕಿನ ವಿವಿಧೆಡೆ ಇರುವ 16,850 ಚದರ ಮೀಟರ್ ಅಳತೆಯ ಕೃಷಿ ಜಮೀನುಗಳು, 12,500 ಚದರ ಮೀಟರ್ ಅಳತೆಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿಗಳ ಮಾರ್ಗದರ್ಶಿ ಮೌಲ್ಯವೇ ₹21 ಕೋಟಿಯಷ್ಟಾಗುತ್ತದೆ ಎಂದು ಇ.ಡಿ ತಿಳಿಸಿದೆ.</p>.<p>ಬೇಲೆಕೇರಿ ಬಂದರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ವಶಕ್ಕೆ ಪಡೆದು ಸಂಗ್ರಹಿಸಿದ್ದ 5 ಲಕ್ಷ ಟನ್ಗಳಷ್ಟು ಕಬ್ಬಿಣದ ಅದಿರಿನಲ್ಲಿ, 1.54 ಲಕ್ಷ ಟನ್ಗಳಷ್ಟು ಅದಿರನ್ನು ಸತೀಶ್ ಸೈಲ್ ಅವರ ಒಡೆತನದ ಎಸ್ಎಂಎಸ್ಪಿಎಲ್ ಕಂಪನಿಯು ಚೀನಾಕ್ಕೆ ರಫ್ತು ಮಾಡಿತ್ತು. ಎಂವಿ ಕೊಲಂಬಿಯ ಮತ್ತು ಎಂವಿ ಮ್ಯಾಡರಿನ್ ಎಂಬ ಹಡಗುಗಳ ಮೂಲಕ ಈ ಅದಿರನ್ನು ಸಾಗಿಸಲಾಗಿತ್ತು ಎಂದು ವಿವರಿಸಿದೆ.</p>.<p>ಚೀನಾದಲ್ಲಿ ಮತ್ತೊಂದು ಕಂಪನಿಯನ್ನು ತರೆದು, ಆ ಕಂಪನಿಯು ಈ ಅದಿರನ್ನು ಖರೀದಿಸಿದಂತೆ ದಾಖಲೆ ಸೃಷ್ಟಿಸಲಾಗಿತ್ತು. ವಾಸ್ತವದಲ್ಲಿ ಬೇರೆಯದ್ದೇ ಕಂಪನಿಗೆ ಅದಿರನ್ನು ಮಾರಾಟ ಮಾಡಲಾಗಿತ್ತು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಸೇರಿದ ₹64 ಕೋಟಿಯಷ್ಟು ಮಾರುಕಟ್ಟೆ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ಗೋವಾದ ವಾಸ್ಕೋಡಗಾಮಾದ ‘ಅವರ್ ಲೇಡಿ ಮರ್ಸಸ್’ ವಾಣಿಜ್ಯ ಸಂಕೀರ್ಣ, ದಕ್ಷಿಣ ಗೋವಾದ ಮರ್ಮಗಾವೊ ತಾಲ್ಲೂಕಿನ ವಿವಿಧೆಡೆ ಇರುವ 16,850 ಚದರ ಮೀಟರ್ ಅಳತೆಯ ಕೃಷಿ ಜಮೀನುಗಳು, 12,500 ಚದರ ಮೀಟರ್ ಅಳತೆಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿಗಳ ಮಾರ್ಗದರ್ಶಿ ಮೌಲ್ಯವೇ ₹21 ಕೋಟಿಯಷ್ಟಾಗುತ್ತದೆ ಎಂದು ಇ.ಡಿ ತಿಳಿಸಿದೆ.</p>.<p>ಬೇಲೆಕೇರಿ ಬಂದರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ವಶಕ್ಕೆ ಪಡೆದು ಸಂಗ್ರಹಿಸಿದ್ದ 5 ಲಕ್ಷ ಟನ್ಗಳಷ್ಟು ಕಬ್ಬಿಣದ ಅದಿರಿನಲ್ಲಿ, 1.54 ಲಕ್ಷ ಟನ್ಗಳಷ್ಟು ಅದಿರನ್ನು ಸತೀಶ್ ಸೈಲ್ ಅವರ ಒಡೆತನದ ಎಸ್ಎಂಎಸ್ಪಿಎಲ್ ಕಂಪನಿಯು ಚೀನಾಕ್ಕೆ ರಫ್ತು ಮಾಡಿತ್ತು. ಎಂವಿ ಕೊಲಂಬಿಯ ಮತ್ತು ಎಂವಿ ಮ್ಯಾಡರಿನ್ ಎಂಬ ಹಡಗುಗಳ ಮೂಲಕ ಈ ಅದಿರನ್ನು ಸಾಗಿಸಲಾಗಿತ್ತು ಎಂದು ವಿವರಿಸಿದೆ.</p>.<p>ಚೀನಾದಲ್ಲಿ ಮತ್ತೊಂದು ಕಂಪನಿಯನ್ನು ತರೆದು, ಆ ಕಂಪನಿಯು ಈ ಅದಿರನ್ನು ಖರೀದಿಸಿದಂತೆ ದಾಖಲೆ ಸೃಷ್ಟಿಸಲಾಗಿತ್ತು. ವಾಸ್ತವದಲ್ಲಿ ಬೇರೆಯದ್ದೇ ಕಂಪನಿಗೆ ಅದಿರನ್ನು ಮಾರಾಟ ಮಾಡಲಾಗಿತ್ತು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>