ಯಾರು ಎಲ್ಲಿಗಾದರೂ ಹೋಗಲಿ: ಬಿಎಸ್ವೈ
‘ಯಾರು ಎಲ್ಲಿಗೆ ಬೇಕಾದರೂ ಹೋಗಲಿ ಅದರ ಬಗ್ಗೆ ನಾನು ಚಿಂತೆ ಮಾಡುತ್ತಿಲ್ಲ’ ಎಂದು ಯಡಿಯೂರಪ್ಪ ಹೇಳಿದರು. ದೀಪಾವಳಿ ಬಳಿಕ ಬಿಜೆಪಿಯ ಒಂದಷ್ಟು ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ‘ರಾಜ್ಯ ಸರ್ಕಾರದ ವಿರುದ್ಧ ಪ್ರಬಲ ವಿರೋಧ ಪಕ್ಷವಾಗಿ ಕೆಲಸ ಮಾಡುವ ಬಗ್ಗೆ ಯೋಚಿಸುತ್ತೇನೆ’ ಎಂದೂ ಅವರು ಹೇಳಿದರು.