ಕಾಗವಾಡ ಕ್ಷೇತ್ರದಲ್ಲಿ ಅಭ್ಯರ್ಥಿ ಶ್ರೀಮಂತ ಪಾಟೀಲ ಪರ ಪ್ರಚಾರ ಮಾಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.‘ಗೋಕಾಕದಲ್ಲಿ ಏಕಮುಖ ಚುನಾವಣೆ ನಡೆಯುತ್ತಿದೆ. ಅಥಣಿ, ಕಾಗವಾಡದಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಈ ನಿಟ್ಟಿನಲ್ಲಿ ನಮಗೆ ಈಗಾಗಲೇ ವರದಿ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ದೊಡ್ಡ ಪಕ್ಷವಾದ ಬಿಜೆಪಿಯಲ್ಲಿ ಸಣ್ಣಪುಟ್ಟ ಭಿನ್ನಮತ ಇರುತ್ತದೆ. ಆದರೆ, ಗೆಲುವಿಗೆ ತೊಂದರೆಯಾಗುವುದಿಲ್ಲ’ ಎಂದರು.