<p><strong>ವಿಜಯಪುರ:</strong> ಚಡಚಣ ಪಟ್ಟಣದ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ತಿಳಿಸಿದರು.</p><p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ₹ 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ ಎಂದರು.</p><p>ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.</p><p>ಬಂಧಿತ ಮಹಾರಾಷ್ಟ್ರದ ಮುಖ್ಯ ಆರೋಪಿಯು (ತನಿಖೆ ದೃಷ್ಟಿಯಿಂದ ಹೆಸರು ಬಹಿರಂಗ ಪಡಿಸಲಿಲ್ಲ) ಬ್ಯಾಂಕ್ ದರೋಡೆಗೂ ಮುನ್ನಾ ಹಲವಾರು ಬಾರಿ ಬ್ಯಾಂಕಿಗೆ ಬಂದು ಒಳ-ಹೊರಗೆ ಪರಿಶೀಲನೆ ಮಾಡಿಕೊಂಡು ಹೋಗಿರುತ್ತಾನೆ. ಅಲ್ಲದೇ, ಬ್ಯಾಂಕ್ ದರೋಡೆ ಮಾಡಲು ಮಂಗಳವೇಡಾದಲ್ಲಿ ಒಂದು ಕಾರನ್ನು ಕಳವು ಮಾಡಿ, ಅದನ್ನು ಕೃತ್ಯಕ್ಕೆ ಬಳಸಿದ್ದನು ಎಂದರು.</p><p>ಆರೋಪಿಯನ್ನು ಅ.7ರಂದು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಈತನಿಂದ 55 ಗ್ರಾಂ ಬಂಗಾರದ ಬಳೆಗಳು ಹಾಗೂ ಕೃತ್ಯಕ್ಕೆ ಬಳಸಿದ 1 ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. </p><p>ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಪಿಸ್ತೂಲ್ಗಳನ್ನು ಪೂರೈಸಿದ ಬಿಹಾರ ರಾಜ್ಯದ ಸಮಸ್ತಿಪುರದ ರಾಕೇಶಕುಮಾರ ಸಹಾನಿ(22), ರಾಜುಕುಮಾರ ಪಾಸ್ವಾನ(21) ಮತ್ತು ರಕ್ಷಕಕುಮಾರ ಮಾತೊ(21) ಎಂಬುವವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದರು.</p><h2>ಪ್ರಕರಣದ ವಿವರ:</h2><p>ಕಳೆದ ಸೆಪ್ಟೆಂಬರ್ 16ರಂದು ಮೂರು ಜನ ಅಪರಿಚಿತ ವ್ಯಕ್ತಿಗಳು ಮಾಸ್ಕ್ ಧರಿಸಿಕೊಂಡು ಬಂದು ಖಾತೆ ತೆರೆಯುವ ನೆಪದಲ್ಲಿ ಬ್ಯಾಂಕಿನೊಳಗೆ ಪ್ರವೇಶಿಸಿ, ನಂತರ ಪಿಸ್ತೂಲ್ ಮತ್ತು ಚಾಕುಗಳನ್ನು ತೋರಿಸಿ ಬ್ಯಾಂಕ್ ಸಿಬ್ಬಂದಿಯನ್ನು ಕಟ್ಟಿಹಾಕಿ, ಬ್ಯಾಂಕಿನ ಸ್ಟ್ರಾಂಗ್ ರೂಮ್ನಲ್ಲಿದ್ದ ಸುಮಾರು ₹1.04 ಕೋಟಿ ನಗದು ಮತ್ತು 20 ಕೆ.ಜಿ. ಚಿನ್ನಾಭರಣವನ್ನು (ಅಂದಾಜು ಮೌಲ್ಯ ₹20 ಕೋಟಿ) ದೋಚಿ ಪರಾರಿಯಾಗಿದ್ದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಕರಣದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಚಡಚಣ ಪಟ್ಟಣದ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ತಿಳಿಸಿದರು.</p><p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ₹ 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ ಎಂದರು.</p><p>ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.</p><p>ಬಂಧಿತ ಮಹಾರಾಷ್ಟ್ರದ ಮುಖ್ಯ ಆರೋಪಿಯು (ತನಿಖೆ ದೃಷ್ಟಿಯಿಂದ ಹೆಸರು ಬಹಿರಂಗ ಪಡಿಸಲಿಲ್ಲ) ಬ್ಯಾಂಕ್ ದರೋಡೆಗೂ ಮುನ್ನಾ ಹಲವಾರು ಬಾರಿ ಬ್ಯಾಂಕಿಗೆ ಬಂದು ಒಳ-ಹೊರಗೆ ಪರಿಶೀಲನೆ ಮಾಡಿಕೊಂಡು ಹೋಗಿರುತ್ತಾನೆ. ಅಲ್ಲದೇ, ಬ್ಯಾಂಕ್ ದರೋಡೆ ಮಾಡಲು ಮಂಗಳವೇಡಾದಲ್ಲಿ ಒಂದು ಕಾರನ್ನು ಕಳವು ಮಾಡಿ, ಅದನ್ನು ಕೃತ್ಯಕ್ಕೆ ಬಳಸಿದ್ದನು ಎಂದರು.</p><p>ಆರೋಪಿಯನ್ನು ಅ.7ರಂದು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲಾಗಿದೆ. ಈತನಿಂದ 55 ಗ್ರಾಂ ಬಂಗಾರದ ಬಳೆಗಳು ಹಾಗೂ ಕೃತ್ಯಕ್ಕೆ ಬಳಸಿದ 1 ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. </p><p>ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಪಿಸ್ತೂಲ್ಗಳನ್ನು ಪೂರೈಸಿದ ಬಿಹಾರ ರಾಜ್ಯದ ಸಮಸ್ತಿಪುರದ ರಾಕೇಶಕುಮಾರ ಸಹಾನಿ(22), ರಾಜುಕುಮಾರ ಪಾಸ್ವಾನ(21) ಮತ್ತು ರಕ್ಷಕಕುಮಾರ ಮಾತೊ(21) ಎಂಬುವವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದರು.</p><h2>ಪ್ರಕರಣದ ವಿವರ:</h2><p>ಕಳೆದ ಸೆಪ್ಟೆಂಬರ್ 16ರಂದು ಮೂರು ಜನ ಅಪರಿಚಿತ ವ್ಯಕ್ತಿಗಳು ಮಾಸ್ಕ್ ಧರಿಸಿಕೊಂಡು ಬಂದು ಖಾತೆ ತೆರೆಯುವ ನೆಪದಲ್ಲಿ ಬ್ಯಾಂಕಿನೊಳಗೆ ಪ್ರವೇಶಿಸಿ, ನಂತರ ಪಿಸ್ತೂಲ್ ಮತ್ತು ಚಾಕುಗಳನ್ನು ತೋರಿಸಿ ಬ್ಯಾಂಕ್ ಸಿಬ್ಬಂದಿಯನ್ನು ಕಟ್ಟಿಹಾಕಿ, ಬ್ಯಾಂಕಿನ ಸ್ಟ್ರಾಂಗ್ ರೂಮ್ನಲ್ಲಿದ್ದ ಸುಮಾರು ₹1.04 ಕೋಟಿ ನಗದು ಮತ್ತು 20 ಕೆ.ಜಿ. ಚಿನ್ನಾಭರಣವನ್ನು (ಅಂದಾಜು ಮೌಲ್ಯ ₹20 ಕೋಟಿ) ದೋಚಿ ಪರಾರಿಯಾಗಿದ್ದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಕರಣದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>