<p><strong>ನವದೆಹಲಿ:</strong> ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಜಾತ್ಯತೀತ ಜನತಾದಳ ನಾಯಕ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಗುರುವಾರ ವಜಾಗೊಳಿಸಿದೆ.</p>.ಪ್ರಜ್ವಲ್ ರೇವಣ್ಣ ಪ್ರಕರಣ | ವಿಶೇಷ ಪ್ರಾಸಿಕ್ಯೂಟರ್ ನೇಮಕವಾಗಿದೆಯೇ?: ಹೈಕೋರ್ಟ್.<p>ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದರು.</p><p>ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪಕ್ಷಪಾತ ತೋರಿದ್ದಾರೆ ಎನ್ನುವ ಪ್ರಜ್ವಲ್ ರೇವಣ್ಣ ವಾದವನ್ನು ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ. ಜಾಯ್ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ನಿರಾಕರಿಸಿತು.</p><p>ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಈ ಮನವಿಯನ್ನು ತಿರಸ್ಕರಿಸಿತ್ತು.</p>.ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ಜೈಲಿನಲ್ಲಿ ಕ್ಲರ್ಕ್.<p>ಹಿರಿಯ ವಕೀಲರಾದ ಸಿದ್ಧಾರ್ಥ್ ಲೂಥ್ರ ಹಾಗೂ ಸಿದ್ಧಾರ್ಥ್ ದಾವೆ ಅವರು ಪ್ರಜ್ವಲ್ ಪರ ಹಾಜರಾದರು. ನ್ಯಾಯಾಧೀಶರು, ವಕೀಲರ ವಿರುದ್ಧವೂ ಮಾತನಾಡಿದ್ದರು ಎನ್ನುವುದನ್ನು ಕೋರ್ಟ್ ಗಮನಕ್ಕೆ ತಂದರು.</p><p>ವಿಚಾರಣೆಯಲ್ಲಿ ಪಕ್ಷಪಾತ ನಡೆದಿದೆ ಎನ್ನುವ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಕೋರ್ಟ್, ಹೈಕೋರ್ಟ್ ಮಾಡಿದ ಟಿಪ್ಪಣಿಗಳನ್ನು ತೆಗೆದುಹಾಕಲು ಹೈಕೋರ್ಟ್ ಅನ್ನೇ ಸಮೀಪಿಸಿ ಎಂದು ಹೇಳಿದೆ.</p>.ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಲೇಬಾರದು: ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಜಾತ್ಯತೀತ ಜನತಾದಳ ನಾಯಕ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಗುರುವಾರ ವಜಾಗೊಳಿಸಿದೆ.</p>.ಪ್ರಜ್ವಲ್ ರೇವಣ್ಣ ಪ್ರಕರಣ | ವಿಶೇಷ ಪ್ರಾಸಿಕ್ಯೂಟರ್ ನೇಮಕವಾಗಿದೆಯೇ?: ಹೈಕೋರ್ಟ್.<p>ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದರು.</p><p>ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪಕ್ಷಪಾತ ತೋರಿದ್ದಾರೆ ಎನ್ನುವ ಪ್ರಜ್ವಲ್ ರೇವಣ್ಣ ವಾದವನ್ನು ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ. ಜಾಯ್ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ನಿರಾಕರಿಸಿತು.</p><p>ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಈ ಮನವಿಯನ್ನು ತಿರಸ್ಕರಿಸಿತ್ತು.</p>.ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ಜೈಲಿನಲ್ಲಿ ಕ್ಲರ್ಕ್.<p>ಹಿರಿಯ ವಕೀಲರಾದ ಸಿದ್ಧಾರ್ಥ್ ಲೂಥ್ರ ಹಾಗೂ ಸಿದ್ಧಾರ್ಥ್ ದಾವೆ ಅವರು ಪ್ರಜ್ವಲ್ ಪರ ಹಾಜರಾದರು. ನ್ಯಾಯಾಧೀಶರು, ವಕೀಲರ ವಿರುದ್ಧವೂ ಮಾತನಾಡಿದ್ದರು ಎನ್ನುವುದನ್ನು ಕೋರ್ಟ್ ಗಮನಕ್ಕೆ ತಂದರು.</p><p>ವಿಚಾರಣೆಯಲ್ಲಿ ಪಕ್ಷಪಾತ ನಡೆದಿದೆ ಎನ್ನುವ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಕೋರ್ಟ್, ಹೈಕೋರ್ಟ್ ಮಾಡಿದ ಟಿಪ್ಪಣಿಗಳನ್ನು ತೆಗೆದುಹಾಕಲು ಹೈಕೋರ್ಟ್ ಅನ್ನೇ ಸಮೀಪಿಸಿ ಎಂದು ಹೇಳಿದೆ.</p>.ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಲೇಬಾರದು: ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>