<p><strong>ಬೆಂಗಳೂರು:</strong> ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ವಾಲ್ಮೀಕಿ– ನಾಯಕ ಸಮುದಾಯದ ಬೇಡಿಕೆಯ ಸಾಧಕ– ಬಾಧಕಗಳನ್ನು ಚರ್ಚಿಸಲು ಆಯೋಗವೊಂದನ್ನು ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ ಶೇ 7 ಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ ವಾಲ್ಮೀಕಿ ಮತ್ತು ನಾಯಕ ಸಮುದಾಯ ಹೋರಾಟ ನಡೆಸಿತ್ತು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಈ ಸಂಬಂಧ ಬೆಂಗಳೂರಿಗೆ ಪಾದಯಾತ್ರೆ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು.</p>.<p>ಕಳೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಪರಿಷ್ಕರಣೆ ವಿಷಯ ಪ್ರಸ್ತಾವವಾಗಿತ್ತು. ಸಮಿತಿ ರಚಿಸಬೇಕೋ ಅಥವಾ ಆಯೋಗ ರಚಿಸಬೇಕೋ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಎಲ್ಲ ರಾಜಕೀಯ ಪಕ್ಷಗಳಲ್ಲಿರುವ ಪರಿಶಿಷ್ಟ ಪಂಗಡದ ಶಾಸಕರಿಂದಲೂ ಒತ್ತಡ ಹೆಚ್ಚಾಗಿದ್ದರಿಂದ ಈ ಬಗ್ಗೆ ಆಯೋಗ ರಚಿಸುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಯಿತು.</p>.<p>ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲು ಅಲ್ಲಿನ ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಈ ಸಮುದಾಯಕ್ಕೆ ಶೇ 16 ರಷ್ಟು ಮೀಸಲು ನಿಗದಿ ಮಾಡಿತ್ತು. ಹೈಕೋರ್ಟ್ ಈ ನಿರ್ಧಾರವನ್ನು ಎತ್ತಿ ಹಿಡಿದಿದೆಯಾದರೂ ಮೀಸಲಾತಿ ಪ್ರಮಾಣವನ್ನು ಶೇ 12–13 ಕ್ಕೆ ಇಳಿಸಿದೆ. ಅದೇ ಮಾದರಿ ಅನುಸರಿಸಿ ರಾಜ್ಯದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಪ್ರಮಾಣವನ್ನು ಈಗ ಇರುವ ಶೇ 3 ರಿಂದ ಶೇ 7 ಕ್ಕೆ ಹೆಚ್ಚಿಸಬಹುದು ಎಂಬ ಸಲಹೆಯೂ ಕಳೆದ ಸಚಿವ ಸಂಪುಟ ಸಭೆಯಲ್ಲಿ ಕೇಳಿ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ವಾಲ್ಮೀಕಿ– ನಾಯಕ ಸಮುದಾಯದ ಬೇಡಿಕೆಯ ಸಾಧಕ– ಬಾಧಕಗಳನ್ನು ಚರ್ಚಿಸಲು ಆಯೋಗವೊಂದನ್ನು ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ ಶೇ 7 ಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ ವಾಲ್ಮೀಕಿ ಮತ್ತು ನಾಯಕ ಸಮುದಾಯ ಹೋರಾಟ ನಡೆಸಿತ್ತು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಈ ಸಂಬಂಧ ಬೆಂಗಳೂರಿಗೆ ಪಾದಯಾತ್ರೆ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು.</p>.<p>ಕಳೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಪರಿಷ್ಕರಣೆ ವಿಷಯ ಪ್ರಸ್ತಾವವಾಗಿತ್ತು. ಸಮಿತಿ ರಚಿಸಬೇಕೋ ಅಥವಾ ಆಯೋಗ ರಚಿಸಬೇಕೋ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಎಲ್ಲ ರಾಜಕೀಯ ಪಕ್ಷಗಳಲ್ಲಿರುವ ಪರಿಶಿಷ್ಟ ಪಂಗಡದ ಶಾಸಕರಿಂದಲೂ ಒತ್ತಡ ಹೆಚ್ಚಾಗಿದ್ದರಿಂದ ಈ ಬಗ್ಗೆ ಆಯೋಗ ರಚಿಸುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಯಿತು.</p>.<p>ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲು ಅಲ್ಲಿನ ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಈ ಸಮುದಾಯಕ್ಕೆ ಶೇ 16 ರಷ್ಟು ಮೀಸಲು ನಿಗದಿ ಮಾಡಿತ್ತು. ಹೈಕೋರ್ಟ್ ಈ ನಿರ್ಧಾರವನ್ನು ಎತ್ತಿ ಹಿಡಿದಿದೆಯಾದರೂ ಮೀಸಲಾತಿ ಪ್ರಮಾಣವನ್ನು ಶೇ 12–13 ಕ್ಕೆ ಇಳಿಸಿದೆ. ಅದೇ ಮಾದರಿ ಅನುಸರಿಸಿ ರಾಜ್ಯದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಪ್ರಮಾಣವನ್ನು ಈಗ ಇರುವ ಶೇ 3 ರಿಂದ ಶೇ 7 ಕ್ಕೆ ಹೆಚ್ಚಿಸಬಹುದು ಎಂಬ ಸಲಹೆಯೂ ಕಳೆದ ಸಚಿವ ಸಂಪುಟ ಸಭೆಯಲ್ಲಿ ಕೇಳಿ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>