<p><strong>ಬಾಗಲಕೋಟೆ</strong>: ‘ಪರಿಶಿಷ್ಟ ಜಾತಿ ಜನಸಂಖ್ಯೆ ರಾಜ್ಯದಲ್ಲಿ ಶೇ18ರಷ್ಟಿದ್ದು, ಮೀಸಲಾತಿ ಪ್ರಮಾಣವನ್ನೂ ಶೇ 18ಕ್ಕೆ ಹೆಚ್ಚಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದರು.</p><p>‘ಭೋವಿ, ಬಂಜಾರ, ಕೊರಮ, ಕೊರಚ ಜಾತಿಯವರು ಶೇ 5 ರಷ್ಟು ಮತ್ತು ಅಲೆಮಾರಿಗಳು ಶೇ 1ರಷ್ಟು ಇದ್ದಾರೆ. ಆದ್ದರಿಂದ ಮೀಸಲಾತಿ ಹೆಚ್ಚಿಸಿ, ಎಲ್ಲ ಗುಂಪುಗಳಿಗೆ ಸಮನಾದ ಒಳಮೀಸಲಾತಿ ನೀಡಬೇಕು’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p><p>‘2011ರ ಜನಗಣತಿಯಲ್ಲಿ ಪರಿಶಿಷ್ಟ ಜಾತಿ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ. ರಾಜ್ಯದಲ್ಲಿ ಶೇ 22ರಷ್ಟು ಜನಸಂಖ್ಯೆ ಹೆಚ್ಚಳವಾಗಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1.22 ಕೋಟಿಯಿಂದ 1.35 ಕೋಟಿಯೊಳಗೆ ಇರಬೇಕಿತ್ತು. ಅಲೆಮಾರಿ, ಅರೆ ಅಲೆಮಾರಿಗಳನ್ನು ಕಡೆಗಣಿಸಲಾಗಿದೆ’ ಎಂದರು.</p><p>‘ಎಡಗೈ, ಬಲಗೈ ಸಂಘರ್ಷದಲ್ಲಿ ಧ್ವನಿ ಇಲ್ಲದ ಸಮಾಜಗಳಿಗೆ ಅನ್ಯಾಯವಾಗಿದೆ. ಸಮೀಕ್ಷೆಯಲ್ಲಿ ಅತ್ಯಂತ ಹಿಂದುಳಿದ ಎಂದು ಗುರುತಿಸಲಾದ ‘ಸಿ’ ಗುಂಪಿಗೆ ರೋಸ್ಟರ್ ಪದ್ಧತಿಯಲ್ಲಿ ಬಿಂದು ‘1’ ನೀಡಬೇಕು ಎಂದರು.</p><p>ವಿಮುಕ್ತ ಸಮುದಾಯ: ‘‘ಸಿ’ ಗುಂಪಿಗೆ ಅಸಾಂವಿಧಾನಿಕ ಪದ ‘ಸ್ಪೃಶ್ಯ’ ಬದಲಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಗುರುತಿಸಿರುವಂತೆ ‘ವಿಮುಕ್ತ ಸಮುದಾಯ’ ಎಂದು ಗುರುತಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಪರಿಶಿಷ್ಟ ಜಾತಿ ಜನಸಂಖ್ಯೆ ರಾಜ್ಯದಲ್ಲಿ ಶೇ18ರಷ್ಟಿದ್ದು, ಮೀಸಲಾತಿ ಪ್ರಮಾಣವನ್ನೂ ಶೇ 18ಕ್ಕೆ ಹೆಚ್ಚಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದರು.</p><p>‘ಭೋವಿ, ಬಂಜಾರ, ಕೊರಮ, ಕೊರಚ ಜಾತಿಯವರು ಶೇ 5 ರಷ್ಟು ಮತ್ತು ಅಲೆಮಾರಿಗಳು ಶೇ 1ರಷ್ಟು ಇದ್ದಾರೆ. ಆದ್ದರಿಂದ ಮೀಸಲಾತಿ ಹೆಚ್ಚಿಸಿ, ಎಲ್ಲ ಗುಂಪುಗಳಿಗೆ ಸಮನಾದ ಒಳಮೀಸಲಾತಿ ನೀಡಬೇಕು’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p><p>‘2011ರ ಜನಗಣತಿಯಲ್ಲಿ ಪರಿಶಿಷ್ಟ ಜಾತಿ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ. ರಾಜ್ಯದಲ್ಲಿ ಶೇ 22ರಷ್ಟು ಜನಸಂಖ್ಯೆ ಹೆಚ್ಚಳವಾಗಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1.22 ಕೋಟಿಯಿಂದ 1.35 ಕೋಟಿಯೊಳಗೆ ಇರಬೇಕಿತ್ತು. ಅಲೆಮಾರಿ, ಅರೆ ಅಲೆಮಾರಿಗಳನ್ನು ಕಡೆಗಣಿಸಲಾಗಿದೆ’ ಎಂದರು.</p><p>‘ಎಡಗೈ, ಬಲಗೈ ಸಂಘರ್ಷದಲ್ಲಿ ಧ್ವನಿ ಇಲ್ಲದ ಸಮಾಜಗಳಿಗೆ ಅನ್ಯಾಯವಾಗಿದೆ. ಸಮೀಕ್ಷೆಯಲ್ಲಿ ಅತ್ಯಂತ ಹಿಂದುಳಿದ ಎಂದು ಗುರುತಿಸಲಾದ ‘ಸಿ’ ಗುಂಪಿಗೆ ರೋಸ್ಟರ್ ಪದ್ಧತಿಯಲ್ಲಿ ಬಿಂದು ‘1’ ನೀಡಬೇಕು ಎಂದರು.</p><p>ವಿಮುಕ್ತ ಸಮುದಾಯ: ‘‘ಸಿ’ ಗುಂಪಿಗೆ ಅಸಾಂವಿಧಾನಿಕ ಪದ ‘ಸ್ಪೃಶ್ಯ’ ಬದಲಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಗುರುತಿಸಿರುವಂತೆ ‘ವಿಮುಕ್ತ ಸಮುದಾಯ’ ಎಂದು ಗುರುತಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>