<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ಸ್ವೀಕರಿಸಿದ್ದು, ಈ ವರದಿಯ ಬಗ್ಗೆ ಇದೇ ಆ. 16 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ ತಿಳಿಸಿದ್ದಾರೆ.</p><p>ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p><p>ನಾಗಮೋಹನ್ದಾಸ್ ಅವರು ಶ್ರಮವಹಿಸಿ, ಅತಿ ಕಡಿಮೆ ಅವಧಿಯಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಈ ಸಮುದಾಯಗಳ ಶೇ 92 ರಷ್ಟು ಜನರ ಸಮೀಕ್ಷೆ ಮಾಡಲಾಗಿದೆ. ಈ ವರದಿಯ ಪ್ರತಿಗಳನ್ನು ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ವಿತರಿಸಲಾಗಿದೆ. ವಿಶೇಷ ಸಂಪುಟ ಸಭೆಗೆ ಎಲ್ಲರೂ ಓದಿಕೊಂಡು ಬಂದು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.ಒಳಮೀಸಲಾತಿ: ತರಾತುರಿಯಲ್ಲಿ ಜಾರಿಗೊಳಿಸಬೇಡಿ; ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ .ಒಳಮೀಸಲಾತಿ ಜಾರಿಗೆ ಬೆಂಗಳೂರು ಚಲೋ 18ರಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ಸ್ವೀಕರಿಸಿದ್ದು, ಈ ವರದಿಯ ಬಗ್ಗೆ ಇದೇ ಆ. 16 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ ತಿಳಿಸಿದ್ದಾರೆ.</p><p>ಸಚಿವ ಸಂಪುಟ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p><p>ನಾಗಮೋಹನ್ದಾಸ್ ಅವರು ಶ್ರಮವಹಿಸಿ, ಅತಿ ಕಡಿಮೆ ಅವಧಿಯಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಈ ಸಮುದಾಯಗಳ ಶೇ 92 ರಷ್ಟು ಜನರ ಸಮೀಕ್ಷೆ ಮಾಡಲಾಗಿದೆ. ಈ ವರದಿಯ ಪ್ರತಿಗಳನ್ನು ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ವಿತರಿಸಲಾಗಿದೆ. ವಿಶೇಷ ಸಂಪುಟ ಸಭೆಗೆ ಎಲ್ಲರೂ ಓದಿಕೊಂಡು ಬಂದು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.ಒಳಮೀಸಲಾತಿ: ತರಾತುರಿಯಲ್ಲಿ ಜಾರಿಗೊಳಿಸಬೇಡಿ; ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ .ಒಳಮೀಸಲಾತಿ ಜಾರಿಗೆ ಬೆಂಗಳೂರು ಚಲೋ 18ರಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>