<p><strong>ಬೆಂಗಳೂರು: ‘</strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (ಎಸ್ಸಿ–ಎಸ್ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ, ವಿಶೇಷ (ಸೆಷನ್ಸ್) ಕೋರ್ಟ್ಗಳು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಅಂತಹ ಆದೇಶಗಳನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ನೀಡುವುದು ಶಾಸಕಾಂಗದ ವಿವೇಚನೆಗೆ ಬಿಟ್ಟ ವಿಚಾರ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಪ್ರಕರಣವೊಂದರಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ‘381 ದಿನಗಳ ವಿಳಂಬ ಹೊಂದಿದೆ’ ಎಂಬ ಕಾರಣಕ್ಕೆ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು (ಕ್ರಿಮಿನಲ್ ಮೇಲ್ಮನವಿ ಸಂಖ್ಯೆ: 200366/2024) ವಜಾಗೊಳಿಸಿರುವ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ), ‘ಕೆಲವು ಪ್ರಕರಣಗಳಲ್ಲಿ ನಿರ್ಲಕ್ಷ್ಯಕ್ಕಿಂತ ಹೆಚ್ಚಾಗಿ, ನಿಜವಾದ ಕಾರಣಕ್ಕೂ ವಿಳಂಬವಾಗಬಹುದು. ಆದರೆ, ಇಂತಹ ಸೂಕ್ಷ್ಮವನ್ನು ಶಾಸಕಾಂಗದ ತಿದ್ದುಪಡಿ ಮೂಲಕವೇ ಪರಿಹಾರ ಕಂಡುಕೊಳ್ಳಲು ಶಕ್ಯ’ ಎಂದು ಸ್ಪಷ್ಟಪಡಿಸಿದೆ.</p>.<p>ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ, ‘ಮೇಲ್ಮನವಿ ಸಲ್ಲಿಸಲು ಉದ್ದೇಶಪೂರ್ವಕ ವಿಳಂಬ ಮಾಡಿಲ್ಲ. ಸರ್ಕಾರ ಸಕಾಲದಲ್ಲಿ ಅನುಮತಿ ನೀಡಿತ್ತು. ಆದರೆ, ನ್ಯಾಯಾಲಯದಿಂದ ದಾಖಲೆಗಳನ್ನು ಪಡೆದುಕೊಳ್ಳುವುದೂ ಸೇರಿದಂತೆ ಕೆಲವು ವಾಸ್ತವಿಕ ಅಡಚಣೆಗಳಿಂದಾಗಿ ತಡವಾಗಿದೆ. ಹಾಗಾಗಿ, ತಾಂತ್ರಿಕ ಅಂಶಗಳಿಂದ ವಿಳಂಬವಾಗಿರುವ ಇಂತಹ ಪ್ರಕರಣಗಳಲ್ಲಿ ನ್ಯಾಯದಾನಕ್ಕೆ ತೊಂದರೆ ಆಗಬಾರದು. ಆದ್ದರಿಂದ, ವಿಳಂಬವನ್ನು ಮನ್ನಿಸಿ ಮೇಲ್ಮನವಿಯನ್ನು ವಿಚಾರಣೆಗೆ ಪುರಸ್ಕರಿಸಬೇಕು’ ಎಂದು ಮನವಿ ಮಾಡಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ‘ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆ–1989ರ ಕಲಂ 14ಎ(3)ರಡಿ ಸೆಷನ್ಸ್ ನ್ಯಾಯಾಲಯ (ವಿಶೇಷ ಕೋರ್ಟ್) ಆರೋಪಿಯನ್ನು ಖುಲಾಸೆಗೊಳಿಸಿದ್ದರೆ ಅಂತಹ ಆದೇಶಗಳನ್ನು ಪ್ರಶ್ನಿಸಲು ಒಟ್ಟು 180 ದಿನಗಳ ಸಮಯಾವಕಾಶ ನೀಡಲಾಗಿದೆ. ವಿಳಂಬವಾದರೆ ಅಂತಹ ಮೇಲ್ಮನವಿಗಳನ್ನು ಪುರಸ್ಕರಿಸಲು ಕಾನೂನಿನಲ್ಲಿ ನಿಖರವಾದ ತಡೆ ಇದೆ. ಆದಾಗ್ಯೂ, ಇದಕ್ಕೆ ಪರಿಹಾರ ಶಾಸಕಾಂಗದ ಬಳಿ ಇದೆ. ಹಾಗಾಗಿ, ಈ ವಿಚಾರವನ್ನು ಸಂಬಂಧಿಸಿದವರ ಗಮನಕ್ಕೆ ತಂದು ಸೂಕ್ತ ತಿದ್ದುಪಡಿಗೆ ಸಲಹೆ ಮಾಡಬಹುದು’ ಎಂದು ಸೂಚಿಸಿ ಮೇಲ್ಮನವಿ ವಜಾಗೊಳಿಸಿದೆ. ಪ್ರತಿವಾದಿಗಳ ಪರ ಹೈಕೋರ್ಟ್ ವಕೀಲ ಸಿ.ಎಂ.ಚೈತನ್ಯ ಕುಮಾರ್ ವಾದ ಮಂಡಿಸಿದ್ದರು.</p>.<p><strong>ಪ್ರಕರಣವೇನು?:</strong> ಯಾದಗಿರಿ ಜಿಲ್ಲೆ ವ್ಯಾಪ್ತಿಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2014ರಲ್ಲಿ ಶಹಾಪೂರದಲ್ಲಿ ಗುಂಪು ಗಲಭೆ ನಡೆದಿತ್ತು. ಈ ಪ್ರಕರಣದಲ್ಲಿ ಬಸಲಿಂಗಪ್ಪ ಎಂಬುವರು ಸೇರಿದಂತೆ ಐವರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಹಾಗೂ ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ಡೆ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ, ‘ಸೂಕ್ತ ಸಾಕ್ಷ್ಯಾಧಾರ ಇಲ್ಲ’ ಎಂದು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ 2023ರ ಸೆಪ್ಟೆಂಬರ್ 7ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಶಹಾಪೂರ ಪೊಲೀಸರು 2024ರ ಅಕ್ಟೋಬರ್ನಲ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (ಎಸ್ಸಿ–ಎಸ್ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ, ವಿಶೇಷ (ಸೆಷನ್ಸ್) ಕೋರ್ಟ್ಗಳು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಅಂತಹ ಆದೇಶಗಳನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ನೀಡುವುದು ಶಾಸಕಾಂಗದ ವಿವೇಚನೆಗೆ ಬಿಟ್ಟ ವಿಚಾರ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಪ್ರಕರಣವೊಂದರಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ‘381 ದಿನಗಳ ವಿಳಂಬ ಹೊಂದಿದೆ’ ಎಂಬ ಕಾರಣಕ್ಕೆ ರಾಜ್ಯ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು (ಕ್ರಿಮಿನಲ್ ಮೇಲ್ಮನವಿ ಸಂಖ್ಯೆ: 200366/2024) ವಜಾಗೊಳಿಸಿರುವ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ), ‘ಕೆಲವು ಪ್ರಕರಣಗಳಲ್ಲಿ ನಿರ್ಲಕ್ಷ್ಯಕ್ಕಿಂತ ಹೆಚ್ಚಾಗಿ, ನಿಜವಾದ ಕಾರಣಕ್ಕೂ ವಿಳಂಬವಾಗಬಹುದು. ಆದರೆ, ಇಂತಹ ಸೂಕ್ಷ್ಮವನ್ನು ಶಾಸಕಾಂಗದ ತಿದ್ದುಪಡಿ ಮೂಲಕವೇ ಪರಿಹಾರ ಕಂಡುಕೊಳ್ಳಲು ಶಕ್ಯ’ ಎಂದು ಸ್ಪಷ್ಟಪಡಿಸಿದೆ.</p>.<p>ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ, ‘ಮೇಲ್ಮನವಿ ಸಲ್ಲಿಸಲು ಉದ್ದೇಶಪೂರ್ವಕ ವಿಳಂಬ ಮಾಡಿಲ್ಲ. ಸರ್ಕಾರ ಸಕಾಲದಲ್ಲಿ ಅನುಮತಿ ನೀಡಿತ್ತು. ಆದರೆ, ನ್ಯಾಯಾಲಯದಿಂದ ದಾಖಲೆಗಳನ್ನು ಪಡೆದುಕೊಳ್ಳುವುದೂ ಸೇರಿದಂತೆ ಕೆಲವು ವಾಸ್ತವಿಕ ಅಡಚಣೆಗಳಿಂದಾಗಿ ತಡವಾಗಿದೆ. ಹಾಗಾಗಿ, ತಾಂತ್ರಿಕ ಅಂಶಗಳಿಂದ ವಿಳಂಬವಾಗಿರುವ ಇಂತಹ ಪ್ರಕರಣಗಳಲ್ಲಿ ನ್ಯಾಯದಾನಕ್ಕೆ ತೊಂದರೆ ಆಗಬಾರದು. ಆದ್ದರಿಂದ, ವಿಳಂಬವನ್ನು ಮನ್ನಿಸಿ ಮೇಲ್ಮನವಿಯನ್ನು ವಿಚಾರಣೆಗೆ ಪುರಸ್ಕರಿಸಬೇಕು’ ಎಂದು ಮನವಿ ಮಾಡಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ‘ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆ–1989ರ ಕಲಂ 14ಎ(3)ರಡಿ ಸೆಷನ್ಸ್ ನ್ಯಾಯಾಲಯ (ವಿಶೇಷ ಕೋರ್ಟ್) ಆರೋಪಿಯನ್ನು ಖುಲಾಸೆಗೊಳಿಸಿದ್ದರೆ ಅಂತಹ ಆದೇಶಗಳನ್ನು ಪ್ರಶ್ನಿಸಲು ಒಟ್ಟು 180 ದಿನಗಳ ಸಮಯಾವಕಾಶ ನೀಡಲಾಗಿದೆ. ವಿಳಂಬವಾದರೆ ಅಂತಹ ಮೇಲ್ಮನವಿಗಳನ್ನು ಪುರಸ್ಕರಿಸಲು ಕಾನೂನಿನಲ್ಲಿ ನಿಖರವಾದ ತಡೆ ಇದೆ. ಆದಾಗ್ಯೂ, ಇದಕ್ಕೆ ಪರಿಹಾರ ಶಾಸಕಾಂಗದ ಬಳಿ ಇದೆ. ಹಾಗಾಗಿ, ಈ ವಿಚಾರವನ್ನು ಸಂಬಂಧಿಸಿದವರ ಗಮನಕ್ಕೆ ತಂದು ಸೂಕ್ತ ತಿದ್ದುಪಡಿಗೆ ಸಲಹೆ ಮಾಡಬಹುದು’ ಎಂದು ಸೂಚಿಸಿ ಮೇಲ್ಮನವಿ ವಜಾಗೊಳಿಸಿದೆ. ಪ್ರತಿವಾದಿಗಳ ಪರ ಹೈಕೋರ್ಟ್ ವಕೀಲ ಸಿ.ಎಂ.ಚೈತನ್ಯ ಕುಮಾರ್ ವಾದ ಮಂಡಿಸಿದ್ದರು.</p>.<p><strong>ಪ್ರಕರಣವೇನು?:</strong> ಯಾದಗಿರಿ ಜಿಲ್ಲೆ ವ್ಯಾಪ್ತಿಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2014ರಲ್ಲಿ ಶಹಾಪೂರದಲ್ಲಿ ಗುಂಪು ಗಲಭೆ ನಡೆದಿತ್ತು. ಈ ಪ್ರಕರಣದಲ್ಲಿ ಬಸಲಿಂಗಪ್ಪ ಎಂಬುವರು ಸೇರಿದಂತೆ ಐವರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಹಾಗೂ ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ಡೆ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ, ‘ಸೂಕ್ತ ಸಾಕ್ಷ್ಯಾಧಾರ ಇಲ್ಲ’ ಎಂದು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ 2023ರ ಸೆಪ್ಟೆಂಬರ್ 7ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಶಹಾಪೂರ ಪೊಲೀಸರು 2024ರ ಅಕ್ಟೋಬರ್ನಲ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>