‘ಬಿ.ಕೆ. ಪವಿತ್ರ– 1ರ ತೀರ್ಪಿನ ಅನ್ವಯ 3,898 ಎಸ್ಸಿ, ಎಸ್ಟಿ ನೌಕರರಿಗೆ ಹಿಂಬಡ್ತಿ ನೀಡಲಾಗಿತ್ತು. ಸಾಮಾನ್ಯ ವರ್ಗದ 5,002 ನೌಕರರಿಗೆ ಮುಂಬಡ್ತಿ ನೀಡಿ, ಸುಮಾರು 65 ಸಾವಿರ ನೌಕರರ ಜ್ಯೇಷ್ಠತೆಯನ್ನು ಕೆಳಹಂತದಲ್ಲಿ ನಿಗದಿಪಡಿಸಲಾಗಿತ್ತು. ಇದರಿಂದ ಮಾನಸಿಕವಾಗಿ ತೀವ್ರವಾಗಿ ನೊಂದ ಕೆಲವು ಪರಿಶಿಷ್ಟಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲವರು ಹೃದಯಾಘಾತಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಜ್ಯೇಷ್ಠತೆ ಸಂರಕ್ಷಣಾ ಕಾಯ್ದೆ ತಂದರೂ ಅದರಲ್ಲಿರುವ ಸೌಲಭ್ಯಗಳು ಪರಿಶಿಷ್ಟ ನೌಕರರಿಗೆ ಲಭ್ಯವಾಗುತ್ತಿಲ್ಲ’ ಎಂದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಅವರು ತಿಳಿಸಿದ್ದಾರೆ.