<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುತ್ತಿಗೆದಾರರು ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು. ಆದ್ದರಿಂದ, ₹2 ಕೋಟಿಯೊಳಗಿನ ಕಾಮಗಾರಿಗಳನ್ನು ‘ಪ್ಯಾಕೇಜ್ ಅಡಿ ಮಾಡಬಾರದು ಎಂದು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಬೇಕು ಎಂದು ಎಸ್ಸಿಎಸ್ಟಿ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.</p>.<p>ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ವರದಿಯನ್ನು ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.</p>.<p>2025–26 ನೇ ಸಾಲಿನ ಬಜೆಟ್ನಲ್ಲಿ ₹2 ಕೋಟಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರಿಗೆ ಮೀಸಲಾತಿ ಒದಗಿಸುವುದನ್ನು ಘೋಷಿಸಲಾಗಿತ್ತು. ಈ ಸಂಬಂಧ ವಿವಿಧ ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸುವಾಗ ಶೇ 23.01 ರಷ್ಟು ಮೀಸಲಾತಿ ನೀಡಲಾಗುತ್ತದೆ. ಆಗ ಕೆಳ ವರ್ಗದ ಗುತ್ತಿಗೆದಾರರು ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದೆ.</p>.<p><strong>ಪ್ರಮುಖ ಅಂಶಗಳು</strong></p>.<p>* ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಬರುವ ಅಭಿವೃದ್ಧಿ ನಿಗಮಗಳ ಅನುದಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನಸಂಖ್ಯೆಗೆ ಪೂರಕವಾಗಿ ಹಂಚಿಕೆ ಆಗಿಲ್ಲ.</p>.<p>* ಹಲವು ದಶಕಗಳ ಹಿಂದಿನ ಯೋಜನೆಗಳೇ ಅಭಿವೃದ್ಧಿ ನಿಗಮಗಳಲ್ಲಿ ಮುಂದುವರೆದಿವೆ. ಇವುಗಳನ್ನು ವೈಜ್ಞಾನಿಕ ತಳಹದಿಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಮಾಡಬೇಕು.</p>.<p>*ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಲ್ಲಿನ ಹಾಸ್ಟೆಲ್ಗಳ ನಿರ್ವಹಣೆಯಲ್ಲಿ ವಾರ್ಡನ್ಗಳ ಕೊರತೆ ಮತ್ತು ಮೂಲಸೌಕರ್ಯಗಳ ಕೊರತೆಯಿಂದಾಗಿ ಶೈಕ್ಷಣಿಕ ಹಾಗೂ ವಸತಿ ವ್ಯವಸ್ಥೆಗೆ ಅನನುಕೂಲವಾಗುತ್ತದೆ. ಇದನ್ನು ಸರ್ಕಾರ ಆದಷ್ಟು ಬೇಗ ಮಾರ್ಪಾಡು ಮಾಡಬೇಕು.</p>.<p>* ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ನೇಮಕಾತಿ, ಪದೋನ್ನತಿ, ಬ್ಯಾಕ್ಲಾಗ್, ರೋಸ್ಟರ್ಗೆ ಸಂಬಂಧಿಸಿದ ವಿಷಯದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶಗಳು, ಮಾರ್ಗಸೂಚಿಗಳು, ಸುತ್ತೋಲೆಗಳು ಪರಿಣಾಮಕಾರಿಯಾಗಿಲ್ಲ. ಈ ಲೋಪಕ್ಕೆ ಯಾವುದೇ ಶಿಸ್ತು ಕ್ರಮ ಜರುಗಿಸಿರುವುದು ಕಂಡಬಂದಿಲ್ಲ.</p>.<p>* ಎಸ್ಸಿ– ಎಸ್ಟಿ ಹಾಸ್ಟೆಲ್ಗಳು ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಆಹಾರ ಸಾಮಗ್ರಿಗಳ ಟೆಂಡರ್ ಪ್ರಕ್ರಿಯೆ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಆರಂಭಿಸಿ ಆಹಾರ ಪೂರೈಕೆ ಸುಗಮವಾಗಿ ನಡೆಸಲು ಕ್ರಮ ವಹಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುತ್ತಿಗೆದಾರರು ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು. ಆದ್ದರಿಂದ, ₹2 ಕೋಟಿಯೊಳಗಿನ ಕಾಮಗಾರಿಗಳನ್ನು ‘ಪ್ಯಾಕೇಜ್ ಅಡಿ ಮಾಡಬಾರದು ಎಂದು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಬೇಕು ಎಂದು ಎಸ್ಸಿಎಸ್ಟಿ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.</p>.<p>ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ವರದಿಯನ್ನು ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.</p>.<p>2025–26 ನೇ ಸಾಲಿನ ಬಜೆಟ್ನಲ್ಲಿ ₹2 ಕೋಟಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರಿಗೆ ಮೀಸಲಾತಿ ಒದಗಿಸುವುದನ್ನು ಘೋಷಿಸಲಾಗಿತ್ತು. ಈ ಸಂಬಂಧ ವಿವಿಧ ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸುವಾಗ ಶೇ 23.01 ರಷ್ಟು ಮೀಸಲಾತಿ ನೀಡಲಾಗುತ್ತದೆ. ಆಗ ಕೆಳ ವರ್ಗದ ಗುತ್ತಿಗೆದಾರರು ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸೂಚಿಸಿದೆ.</p>.<p><strong>ಪ್ರಮುಖ ಅಂಶಗಳು</strong></p>.<p>* ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಬರುವ ಅಭಿವೃದ್ಧಿ ನಿಗಮಗಳ ಅನುದಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನಸಂಖ್ಯೆಗೆ ಪೂರಕವಾಗಿ ಹಂಚಿಕೆ ಆಗಿಲ್ಲ.</p>.<p>* ಹಲವು ದಶಕಗಳ ಹಿಂದಿನ ಯೋಜನೆಗಳೇ ಅಭಿವೃದ್ಧಿ ನಿಗಮಗಳಲ್ಲಿ ಮುಂದುವರೆದಿವೆ. ಇವುಗಳನ್ನು ವೈಜ್ಞಾನಿಕ ತಳಹದಿಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಮಾಡಬೇಕು.</p>.<p>*ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಲ್ಲಿನ ಹಾಸ್ಟೆಲ್ಗಳ ನಿರ್ವಹಣೆಯಲ್ಲಿ ವಾರ್ಡನ್ಗಳ ಕೊರತೆ ಮತ್ತು ಮೂಲಸೌಕರ್ಯಗಳ ಕೊರತೆಯಿಂದಾಗಿ ಶೈಕ್ಷಣಿಕ ಹಾಗೂ ವಸತಿ ವ್ಯವಸ್ಥೆಗೆ ಅನನುಕೂಲವಾಗುತ್ತದೆ. ಇದನ್ನು ಸರ್ಕಾರ ಆದಷ್ಟು ಬೇಗ ಮಾರ್ಪಾಡು ಮಾಡಬೇಕು.</p>.<p>* ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ನೇಮಕಾತಿ, ಪದೋನ್ನತಿ, ಬ್ಯಾಕ್ಲಾಗ್, ರೋಸ್ಟರ್ಗೆ ಸಂಬಂಧಿಸಿದ ವಿಷಯದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶಗಳು, ಮಾರ್ಗಸೂಚಿಗಳು, ಸುತ್ತೋಲೆಗಳು ಪರಿಣಾಮಕಾರಿಯಾಗಿಲ್ಲ. ಈ ಲೋಪಕ್ಕೆ ಯಾವುದೇ ಶಿಸ್ತು ಕ್ರಮ ಜರುಗಿಸಿರುವುದು ಕಂಡಬಂದಿಲ್ಲ.</p>.<p>* ಎಸ್ಸಿ– ಎಸ್ಟಿ ಹಾಸ್ಟೆಲ್ಗಳು ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಆಹಾರ ಸಾಮಗ್ರಿಗಳ ಟೆಂಡರ್ ಪ್ರಕ್ರಿಯೆ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಆರಂಭಿಸಿ ಆಹಾರ ಪೂರೈಕೆ ಸುಗಮವಾಗಿ ನಡೆಸಲು ಕ್ರಮ ವಹಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>