<p><strong>ಬೆಂಗಳೂರು</strong>: ‘ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ ₹290 ಕೋಟಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.</p>.<p>‘6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ಈಗಾಗಲೇ ₹180 ಕೋಟಿ ವರ್ಗಾವಣೆ ಮಾಡಲಾಗಿದೆ. 1.60 ಲಕ್ಷ ವಿದ್ಯಾರ್ಥಿಗಳಿಗೆ ₹100 ಕೋಟಿ ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ವಿದ್ಯಾಸಿರಿ’ ಯೋಜನೆಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಹಾಸ್ಟೆಲ್ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ ₹1,500ರಂತೆ 10 ತಿಂಗಳ ಮೊತ್ತ ₹ 5 ಸಾವಿರ ವರ್ಗಾವಣೆ ಮಾಡಲಾಗಿದೆ. 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದೆ. ಅದನ್ನು ಸರಿಪಡಿಸಿದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದೆ’ ಎಂದು ವಿವರಿಸಿದ್ದಾರೆ.</p>.<p>‘ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ ನಿಗದಿಯಾಗಿದ್ದ ₹2,292 ಕೋಟಿಯಲ್ಲಿ ₹1,941 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹1,608 ಕೋಟಿ (ಶೇ 83) ವೆಚ್ಚವಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 7,500 ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ ₹92.50 ಕೋಟಿ ಸಾಲ ವಿತರಿಸಲಾಗಿದೆ. ವಕ್ಫ್ ಮಂಡಳಿಗೆ ಬಿಡುಗಡೆಯಾದ ₹157 ಕೋಟಿಯಲ್ಲಿ ₹125 ಕೋಟಿ ವೆಚ್ಚ ಮಾಡಲಾಗಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ ₹290 ಕೋಟಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.</p>.<p>‘6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ಈಗಾಗಲೇ ₹180 ಕೋಟಿ ವರ್ಗಾವಣೆ ಮಾಡಲಾಗಿದೆ. 1.60 ಲಕ್ಷ ವಿದ್ಯಾರ್ಥಿಗಳಿಗೆ ₹100 ಕೋಟಿ ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ವಿದ್ಯಾಸಿರಿ’ ಯೋಜನೆಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಹಾಸ್ಟೆಲ್ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ ₹1,500ರಂತೆ 10 ತಿಂಗಳ ಮೊತ್ತ ₹ 5 ಸಾವಿರ ವರ್ಗಾವಣೆ ಮಾಡಲಾಗಿದೆ. 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದೆ. ಅದನ್ನು ಸರಿಪಡಿಸಿದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದೆ’ ಎಂದು ವಿವರಿಸಿದ್ದಾರೆ.</p>.<p>‘ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ ನಿಗದಿಯಾಗಿದ್ದ ₹2,292 ಕೋಟಿಯಲ್ಲಿ ₹1,941 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹1,608 ಕೋಟಿ (ಶೇ 83) ವೆಚ್ಚವಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 7,500 ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ ₹92.50 ಕೋಟಿ ಸಾಲ ವಿತರಿಸಲಾಗಿದೆ. ವಕ್ಫ್ ಮಂಡಳಿಗೆ ಬಿಡುಗಡೆಯಾದ ₹157 ಕೋಟಿಯಲ್ಲಿ ₹125 ಕೋಟಿ ವೆಚ್ಚ ಮಾಡಲಾಗಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>