<p><strong>ಬೆಂಗಳೂರು</strong>: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಬುಧವಾರ (ಏ. 16) ನಿರ್ಧಾರ ಪ್ರಕಟಿಸಲಿದೆ.</p>.<p>ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು. </p>.<p>ರಾಜ್ಯ ಶಿಕ್ಷಣ ನೀತಿ ಆಯೋಗ ವರದಿ ನೀಡಿದ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ, ಖಚಿತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದರು. ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೆ ತಂದಿದ್ದರು. </p>.<p>‘ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಕಾರಣ ಪೋಷಕರಲ್ಲಿನ ಗೊಂದಲ ನಿವಾರಿಸಲು ಆಯೋಗ ಕೆಲ ಶಿಫಾರಸುಗಳನ್ನು ಮಾಡಿದೆ. 2025–26ನೇ ಸಾಲಿನ ಪ್ರವೇಶವನ್ನು ಹಿಂದಿನ ವರ್ಷ ಇದ್ದಂತೆ ಮುಂದುವರಿಸಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಲ್ಕೆಜಿ ಪ್ರವೇಶಕ್ಕೆ 4 ವರ್ಷ ಕಡ್ಡಾಯಗೊಳಿಸಬೇಕು ಎಂದು ಸೂಚಿಸಲಾಗಿದೆ’ ಎಂದು ಆಯೋಗದ ಮೂಲಗಳು ಹೇಳಿವೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಬುಧವಾರ ಅಧಿಕೃತ ನಿರ್ಧಾರ ಪ್ರಕಟಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಬುಧವಾರ (ಏ. 16) ನಿರ್ಧಾರ ಪ್ರಕಟಿಸಲಿದೆ.</p>.<p>ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು. </p>.<p>ರಾಜ್ಯ ಶಿಕ್ಷಣ ನೀತಿ ಆಯೋಗ ವರದಿ ನೀಡಿದ ನಂತರ ಮುಖ್ಯಮಂತ್ರಿ ಜತೆ ಚರ್ಚಿಸಿ, ಖಚಿತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದರು. ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೆ ತಂದಿದ್ದರು. </p>.<p>‘ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಕಾರಣ ಪೋಷಕರಲ್ಲಿನ ಗೊಂದಲ ನಿವಾರಿಸಲು ಆಯೋಗ ಕೆಲ ಶಿಫಾರಸುಗಳನ್ನು ಮಾಡಿದೆ. 2025–26ನೇ ಸಾಲಿನ ಪ್ರವೇಶವನ್ನು ಹಿಂದಿನ ವರ್ಷ ಇದ್ದಂತೆ ಮುಂದುವರಿಸಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಲ್ಕೆಜಿ ಪ್ರವೇಶಕ್ಕೆ 4 ವರ್ಷ ಕಡ್ಡಾಯಗೊಳಿಸಬೇಕು ಎಂದು ಸೂಚಿಸಲಾಗಿದೆ’ ಎಂದು ಆಯೋಗದ ಮೂಲಗಳು ಹೇಳಿವೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಬುಧವಾರ ಅಧಿಕೃತ ನಿರ್ಧಾರ ಪ್ರಕಟಿಸಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>