ಸರ್ಕಾರವು 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಅರ್ಧ ದಿನ ತರಗತಿಗಳನ್ನು ಪ್ರಾರಂಭಿಸಿದೆ. ಶಾಲೆಗಳನ್ನು ತೆರೆಯುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಕೋವಿಡ್ ಕಾರಣ ಶಾಲೆಗಳನ್ನು ಮುಚ್ಚಿದ ಪರಿಣಾಮ ರಾಜ್ಯದಲ್ಲಿ ಬಾಲ್ಯ ವಿವಾಹ, ಕಾರ್ಮಿಕ ಪದ್ಧತಿ, ಮಕ್ಕಳ ಸಾಗಣೆ ಹಾಗೂ ಭಿಕ್ಷಾಟನೆಯಂತಹ ಸಾಮಾಜಿಕ ಸಮಸ್ಯೆಗಳು ಹೆಚ್ಚಲಾರಂಭಿಸಿವೆ ಎಂದು ನ್ಯಾ.ಎಚ್.ಎನ್. ನಾಗಮೋಹನ್ ದಾಸ್, ಡಾ.ಜಿ. ರಾಮಕೃಷ್ಣ, ಕೆ. ಮರಳುಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ. ಸಿದ್ದನಗೌಡ ಪಾಟೀಲ, ವಸುಂದರಾ ಭೂಪತಿ, ವಿಜಯಾ, ಮಲ್ಲಿಕಾ ಘಂಟಿ, ಮಾವಳ್ಳಿ ಶಂಕರ್ ಸೇರಿದಂತೆ ಹಲವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.