<p><strong>ಬೆಂಗಳೂರು</strong>: ಎಸ್ಸಿಎಸ್ಪಿ– ಟಿಎಸ್ಪಿ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು ಮತ್ತು ಈ ಬಾರಿ ಪರಿಶಿಷ್ಟ ಸಮುದಾಯಕ್ಕೆ ಇನ್ನೂ ಹೆಚ್ಚಿನ ಅನುದಾನ ನಿಗದಿ ಮಾಡಬೇಕು ಎಂದು ಪರಿಶಿಷ್ಟ ಜಾತಿ ಪ್ರತಿನಿಧಿಸುವ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.</p>.<p>ಸೋಮವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿಯವರು ಪರಿಶಿಷ್ಟ ಜಾತಿಯ ಶಾಸಕರಿಂದ ಸಲಹೆಗಳನ್ನು ಪಡೆದರು.</p>.<p>ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ, ‘ಪರಿಶಿಷ್ಟ ಸಮುದಾಯದ ಶಾಸಕರು ಹಲವು ಸಮಸ್ಯೆಗಳ ಕುರಿತು ಚರ್ಚೆ ಮಾಡಿದ್ದಾರೆ. ಪರಿಶಿಷ್ಟರಿಗೆ ಅನುದಾನ ನಿಗದಿ ಮಾಡಬೇಕು ಎಂದು ಕಾನೂನು ತಂದವರೇ ಸಿದ್ದರಾಮಯ್ಯ. ಅದರ ಅನ್ವಯ ಕಳೆದ ವರ್ಷ ₹42 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದರು. ಆದರೆ, ಆ ಹಣವನ್ನೆಲ್ಲಾ ವಿವಿಧ ಇಲಾಖೆಗಳಿಗೆ ನೀಡಲಾಗಿತ್ತು. ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಶಾಸಕರು ಸಲಹೆಗಳನ್ನು ನೀಡಿದ್ದಾರೆ’ ಎಂದರು.</p>.<p>ಎರಡೂವರೆ ಲಕ್ಷ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 42 ಸಾವಿರ ಹುದ್ದೆಗಳಿಗೆ ಎಸ್ಸಿ– ಎಸ್ಟಿ ಅಭ್ಯರ್ಥಿಗಳನ್ನು ಭರ್ತಿ ಮಾಡಬೇಕಿದೆ. ಆದಷ್ಟು ಬೇಗ ಈ ಹುದ್ದೆಗಳನ್ನು ತುಂಬಬೇಕು. ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಅವರು ಹೇಳಿದರು.</p>.<p>‘ಎಸ್ಸಿ–ಎಸ್ಟಿ ಶಾಸಕರು ರಾಹುಲ್ಗಾಂಧಿ ಭೇಟಿ ಮಾಡುವ ಯಾವುದೇ ಬೆಳವಣಿಗೆಗಳು ಆಗಿಲ್ಲ. ಅದರ ಅಗತ್ಯವೂ ಇಲ್ಲ. ಯಾವುದೇ ವಿಚಾರ ಹೈಕಮಾಂಡ್ಗೂ ಹೋಗುವ ಮುನ್ನ ಇಲ್ಲೇ ಆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ’ ಎಂದರು.</p>.<p>ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ , ‘ಇದೇ ಮೊದಲ ಬಾರಿಗೆ ಪರಿಶಿಷ್ಟ ಸಮುದಾಯದ ಬೇಡಿಕೆಗಳ ಕುರಿತು ಬಜೆಟ್ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಪರಿಶಿಷ್ಟಜಾತಿಗೆ ಮೀಸಲಾದ ಹಣವನ್ನು ಸರಿಯಾಗಿ ಬಳಸಬೇಕು. ಅನ್ಯ ಉದ್ದೇಶಗಳಿಗೆ ಬಳಸಬಾರದು. ನಿಗದಿ ಮಾಡಿದ ಅಷ್ಟೂ ಹಣವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.</p>.<p>ಗುತ್ತಿಗೆ ನೀಡುವ ವಿಚಾರದಲ್ಲೂ ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಪರಿಶಿಷ್ಟ ಸಮುದಾಯದ ಉದ್ಯಮಿಗಳಿಗೆ ಆದ್ಯತೆ ಮೇರೆಗೆ ಭೂಮಿಯನ್ನು ನೀಡಬೇಕು ಎಂದು ಕೋರಿದ್ದಾಗಿ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್ಸಿಎಸ್ಪಿ– ಟಿಎಸ್ಪಿ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು ಮತ್ತು ಈ ಬಾರಿ ಪರಿಶಿಷ್ಟ ಸಮುದಾಯಕ್ಕೆ ಇನ್ನೂ ಹೆಚ್ಚಿನ ಅನುದಾನ ನಿಗದಿ ಮಾಡಬೇಕು ಎಂದು ಪರಿಶಿಷ್ಟ ಜಾತಿ ಪ್ರತಿನಿಧಿಸುವ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.</p>.<p>ಸೋಮವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿಯವರು ಪರಿಶಿಷ್ಟ ಜಾತಿಯ ಶಾಸಕರಿಂದ ಸಲಹೆಗಳನ್ನು ಪಡೆದರು.</p>.<p>ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ, ‘ಪರಿಶಿಷ್ಟ ಸಮುದಾಯದ ಶಾಸಕರು ಹಲವು ಸಮಸ್ಯೆಗಳ ಕುರಿತು ಚರ್ಚೆ ಮಾಡಿದ್ದಾರೆ. ಪರಿಶಿಷ್ಟರಿಗೆ ಅನುದಾನ ನಿಗದಿ ಮಾಡಬೇಕು ಎಂದು ಕಾನೂನು ತಂದವರೇ ಸಿದ್ದರಾಮಯ್ಯ. ಅದರ ಅನ್ವಯ ಕಳೆದ ವರ್ಷ ₹42 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದರು. ಆದರೆ, ಆ ಹಣವನ್ನೆಲ್ಲಾ ವಿವಿಧ ಇಲಾಖೆಗಳಿಗೆ ನೀಡಲಾಗಿತ್ತು. ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಶಾಸಕರು ಸಲಹೆಗಳನ್ನು ನೀಡಿದ್ದಾರೆ’ ಎಂದರು.</p>.<p>ಎರಡೂವರೆ ಲಕ್ಷ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 42 ಸಾವಿರ ಹುದ್ದೆಗಳಿಗೆ ಎಸ್ಸಿ– ಎಸ್ಟಿ ಅಭ್ಯರ್ಥಿಗಳನ್ನು ಭರ್ತಿ ಮಾಡಬೇಕಿದೆ. ಆದಷ್ಟು ಬೇಗ ಈ ಹುದ್ದೆಗಳನ್ನು ತುಂಬಬೇಕು. ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಅವರು ಹೇಳಿದರು.</p>.<p>‘ಎಸ್ಸಿ–ಎಸ್ಟಿ ಶಾಸಕರು ರಾಹುಲ್ಗಾಂಧಿ ಭೇಟಿ ಮಾಡುವ ಯಾವುದೇ ಬೆಳವಣಿಗೆಗಳು ಆಗಿಲ್ಲ. ಅದರ ಅಗತ್ಯವೂ ಇಲ್ಲ. ಯಾವುದೇ ವಿಚಾರ ಹೈಕಮಾಂಡ್ಗೂ ಹೋಗುವ ಮುನ್ನ ಇಲ್ಲೇ ಆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ’ ಎಂದರು.</p>.<p>ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ , ‘ಇದೇ ಮೊದಲ ಬಾರಿಗೆ ಪರಿಶಿಷ್ಟ ಸಮುದಾಯದ ಬೇಡಿಕೆಗಳ ಕುರಿತು ಬಜೆಟ್ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಪರಿಶಿಷ್ಟಜಾತಿಗೆ ಮೀಸಲಾದ ಹಣವನ್ನು ಸರಿಯಾಗಿ ಬಳಸಬೇಕು. ಅನ್ಯ ಉದ್ದೇಶಗಳಿಗೆ ಬಳಸಬಾರದು. ನಿಗದಿ ಮಾಡಿದ ಅಷ್ಟೂ ಹಣವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.</p>.<p>ಗುತ್ತಿಗೆ ನೀಡುವ ವಿಚಾರದಲ್ಲೂ ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಪರಿಶಿಷ್ಟ ಸಮುದಾಯದ ಉದ್ಯಮಿಗಳಿಗೆ ಆದ್ಯತೆ ಮೇರೆಗೆ ಭೂಮಿಯನ್ನು ನೀಡಬೇಕು ಎಂದು ಕೋರಿದ್ದಾಗಿ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>