<p><strong>ಬೆಂಗಳೂರು</strong>: ‘ಪರಿಶಿಷ್ಟ ಸಮುದಾಯದವರಿಗೆ ಮೀಸಲಾದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು ₹39,000 ಕೋಟಿಯನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸಿದೆ. ಇದು ದಲಿತರಿಗೆ ಮಾಡಿರುವ ವಂಚನೆ’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ದೂರಿವೆ.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳ ದುಂಡು ಮೇಜಿನ ಸಭೆ ಮಂಗಳವಾರ ಇಲ್ಲಿ ನಡೆಯಿತು. ಸುಮಾರು 60 ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು.</p>.<p>‘ಈ ಸಾಲಿನ ಬಜೆಟ್ನಲ್ಲಿ ಪುನಃ ಅದೇ ತಪ್ಪನ್ನು ಮಾಡಿದರೆ ಬಜೆಟ್ ಪ್ರತಿಯನ್ನು ಸುಟ್ಟು ಹಾಕಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ’ ಎಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. </p>.<p>ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ‘ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ಎಲ್ಲ ಸಂಘಟನೆಗಳು ಖಂಡಿಸಿವೆ. ಈ ಸರ್ಕಾರ ದಲಿತರಿಗೆ ವಂಚನೆ ಮಾಡುತ್ತಿದೆ. ಸರ್ಕಾರದ ವಿರುದ್ಧ ದೊಡ್ಡ ಹೋರಾಟ ರೂಪಿಸಬೇಕು ಎಂಬ ಮಾತನ್ನು ಸಭೆಯಲ್ಲಿ ಒಕ್ಕೊರಲಿನಿಂದ ಹೇಳಿದ್ದಾರೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ₹52 ಸಾವಿರ ಕೋಟಿ ಬೇಕು. ಅಷ್ಟು ಮೊತ್ತವನ್ನು ಬಜೆಟ್ನಲ್ಲಿ ತೆಗೆದಿಟ್ಟ ಮೇಲೆ ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಯಾಕೆ ಬಳಸಿಕೊಳ್ಳಬೇಕು? ಒಕ್ಕಲಿಗರಿಗೆ ಒಕ್ಕಲಿಗರ ಅಭಿವೃದ್ಧಿ ನಿಗಮದಿಂದ ತೆಗೆದು ಕೊಡುತ್ತಿದ್ದೀರಾ? ಲಿಂಗಾಯತರಿಗೆ ಕೊಡುವುದನ್ನು ಅವರ ಅಭಿವೃದ್ಧಿ ನಿಗಮದಿಂದ ತೆಗೆದುಕೊಡುತ್ತಿದ್ದೀರಾ’ ಎಂದು ಅವರು ಪ್ರಶ್ನಿಸಿದರು.</p>.<p>‘ಮುಸ್ಲಿಮರಿಗೆ ಕೊಡುವ ಗ್ಯಾರಂಟಿ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ತೆಗೆದು ಕೊಡುತ್ತೀರಾ? ಪರಿಶಿಷ್ಟ ಜಾತಿ, ವರ್ಗಗಳಿಗೆ ಕೊಡುವಾಗ ಅವರ ಹಣ ತೆಗೆದು ಯಾಕೆ ಕೊಡುತ್ತೀರಿ ಎಂಬ ವಿಷಯವನ್ನು ಸಭೆಯಲ್ಲಿ ಎಲ್ಲ ಮುಖಂಡರು ಪ್ರಸ್ತಾಪಿಸಿದರು’ ಎಂದು ಹೇಳಿದರು.</p>.<p>‘ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ₹42 ಸಾವಿರ ಕೋಟಿ ಎಂದು ಜನರಿಗೆ ತೋರಿಸುತ್ತೀರಿ. ಇದರಲ್ಲಿ 34 ಇಲಾಖೆಗಳಿವೆ. ಅವುಗಳಿಗೆ ₹21 ಸಾವಿರ ಕೋಟಿ ಕೊಡುತ್ತೀರಿ. ಉಳಿದ ₹21 ಸಾವಿರ ಕೋಟಿಯಲ್ಲಿ ₹14 ಸಾವಿರ ಕೋಟಿಯನ್ನು ಗ್ಯಾರಂಟಿಗಳಿಗೆ ಬಳಸಿದರೆ ಉಳಿಯುವುದು ₹7 ಸಾವಿರ ಕೋಟಿ. ಅಂದರೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಿಗುವ ಎಸ್ಸಿಎಸ್ಪಿ, ಟಿಎಸ್ಪಿ ಹಣ ಕೇವಲ ₹7 ಸಾವಿರ ಕೋಟಿ. ಅಂದ ಮೇಲೆ ₹42 ಸಾವಿರ ಕೋಟಿ ಕೊಡುತ್ತಿದ್ದೇವೆ ಎಂದು ಯಾಕೆ ಹೇಳಿಕೊಳ್ಳುತ್ತೀರಿ’ ಎಂದು ಛಲವಾದಿ ಪ್ರಶ್ನಿಸಿದರು.</p>.<p>ಸಭೆಯಲ್ಲಿ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪರಿಶಿಷ್ಟ ಸಮುದಾಯದವರಿಗೆ ಮೀಸಲಾದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು ₹39,000 ಕೋಟಿಯನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸಿದೆ. ಇದು ದಲಿತರಿಗೆ ಮಾಡಿರುವ ವಂಚನೆ’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳು ದೂರಿವೆ.</p>.<p>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳ ದುಂಡು ಮೇಜಿನ ಸಭೆ ಮಂಗಳವಾರ ಇಲ್ಲಿ ನಡೆಯಿತು. ಸುಮಾರು 60 ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು.</p>.<p>‘ಈ ಸಾಲಿನ ಬಜೆಟ್ನಲ್ಲಿ ಪುನಃ ಅದೇ ತಪ್ಪನ್ನು ಮಾಡಿದರೆ ಬಜೆಟ್ ಪ್ರತಿಯನ್ನು ಸುಟ್ಟು ಹಾಕಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ’ ಎಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. </p>.<p>ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ‘ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ಎಲ್ಲ ಸಂಘಟನೆಗಳು ಖಂಡಿಸಿವೆ. ಈ ಸರ್ಕಾರ ದಲಿತರಿಗೆ ವಂಚನೆ ಮಾಡುತ್ತಿದೆ. ಸರ್ಕಾರದ ವಿರುದ್ಧ ದೊಡ್ಡ ಹೋರಾಟ ರೂಪಿಸಬೇಕು ಎಂಬ ಮಾತನ್ನು ಸಭೆಯಲ್ಲಿ ಒಕ್ಕೊರಲಿನಿಂದ ಹೇಳಿದ್ದಾರೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ₹52 ಸಾವಿರ ಕೋಟಿ ಬೇಕು. ಅಷ್ಟು ಮೊತ್ತವನ್ನು ಬಜೆಟ್ನಲ್ಲಿ ತೆಗೆದಿಟ್ಟ ಮೇಲೆ ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಯಾಕೆ ಬಳಸಿಕೊಳ್ಳಬೇಕು? ಒಕ್ಕಲಿಗರಿಗೆ ಒಕ್ಕಲಿಗರ ಅಭಿವೃದ್ಧಿ ನಿಗಮದಿಂದ ತೆಗೆದು ಕೊಡುತ್ತಿದ್ದೀರಾ? ಲಿಂಗಾಯತರಿಗೆ ಕೊಡುವುದನ್ನು ಅವರ ಅಭಿವೃದ್ಧಿ ನಿಗಮದಿಂದ ತೆಗೆದುಕೊಡುತ್ತಿದ್ದೀರಾ’ ಎಂದು ಅವರು ಪ್ರಶ್ನಿಸಿದರು.</p>.<p>‘ಮುಸ್ಲಿಮರಿಗೆ ಕೊಡುವ ಗ್ಯಾರಂಟಿ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ತೆಗೆದು ಕೊಡುತ್ತೀರಾ? ಪರಿಶಿಷ್ಟ ಜಾತಿ, ವರ್ಗಗಳಿಗೆ ಕೊಡುವಾಗ ಅವರ ಹಣ ತೆಗೆದು ಯಾಕೆ ಕೊಡುತ್ತೀರಿ ಎಂಬ ವಿಷಯವನ್ನು ಸಭೆಯಲ್ಲಿ ಎಲ್ಲ ಮುಖಂಡರು ಪ್ರಸ್ತಾಪಿಸಿದರು’ ಎಂದು ಹೇಳಿದರು.</p>.<p>‘ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ₹42 ಸಾವಿರ ಕೋಟಿ ಎಂದು ಜನರಿಗೆ ತೋರಿಸುತ್ತೀರಿ. ಇದರಲ್ಲಿ 34 ಇಲಾಖೆಗಳಿವೆ. ಅವುಗಳಿಗೆ ₹21 ಸಾವಿರ ಕೋಟಿ ಕೊಡುತ್ತೀರಿ. ಉಳಿದ ₹21 ಸಾವಿರ ಕೋಟಿಯಲ್ಲಿ ₹14 ಸಾವಿರ ಕೋಟಿಯನ್ನು ಗ್ಯಾರಂಟಿಗಳಿಗೆ ಬಳಸಿದರೆ ಉಳಿಯುವುದು ₹7 ಸಾವಿರ ಕೋಟಿ. ಅಂದರೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಿಗುವ ಎಸ್ಸಿಎಸ್ಪಿ, ಟಿಎಸ್ಪಿ ಹಣ ಕೇವಲ ₹7 ಸಾವಿರ ಕೋಟಿ. ಅಂದ ಮೇಲೆ ₹42 ಸಾವಿರ ಕೋಟಿ ಕೊಡುತ್ತಿದ್ದೇವೆ ಎಂದು ಯಾಕೆ ಹೇಳಿಕೊಳ್ಳುತ್ತೀರಿ’ ಎಂದು ಛಲವಾದಿ ಪ್ರಶ್ನಿಸಿದರು.</p>.<p>ಸಭೆಯಲ್ಲಿ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>