ಕಳೆದ ಒಂಬತ್ತು ವರ್ಷಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಅಡಿ ₹2 ಲಕ್ಷ ಕೋಟಿಗೂ ಹೆಚ್ಚು ಮೊತ್ತ ಖರ್ಚಾಗಿದೆ. ಸಾಧನೆ ಆಗಿರುವುದನ್ನು ದಾಖಲೆಗಳಲ್ಲಿ ತೋರಿಸುತ್ತಾರೆ. ಆದರೆ, ವಾಸ್ತವಿಕ ಸ್ಥಿತಿ ಏನು? ಎಷ್ಟರ ಮಟ್ಟಿಗೆ ಅನುಷ್ಠಾನ ಆಗಿದೆ. ಅದರಿಂದ ಈ ವರ್ಗದವರ ಜೀವನದಲ್ಲಿ ಆಗಿರುವ ಬದಲಾವಣೆಗಳೇನು ಎಂಬುದರ ಮೌಲ್ಯಮಾಪನ ವರದಿ ನೀಡಲು ಎಲ್ಲ ಇಲಾಖೆಗಳಿಗೂ ಸೂಚಿಸಲಾಗಿದೆ. ಐಸೆಕ್, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದಿಂದಲೂ ಮೌಲ್ಯಮಾಪನ ನಡೆಸಲಾಗುವುದು ಎಂದು ಮಹದೇವಪ್ಪ ಹೇಳಿದರು.