<p><strong>ಚಾಮರಾಜನಗರ</strong>: ಬೆಂಗಳೂರಿನ ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಎಸ್ಡಿಪಿಐ ಪಾತ್ರ ಬಹಳಷ್ಟಿದೆ. ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂಬ ಕೂಗು ಬಲವಾಗಿ ಕೇಳಿಬರುತ್ತಿದ್ದು, ನನ್ನ ಅಭಿಪ್ರಾಯವೂ ಇದೆ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದರು.</p>.<p>ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಗಲಭೆಯಲ್ಲಿ ಎಸ್ಡಿಪಿಐ ಪಾತ್ರದ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ನಿಷೇಧದ ಬಗ್ಗೆ ಕೇಳಿಬರುತ್ತಿರುವ ಬೇಡಿಕೆ ಸರ್ವ ಸಮ್ಮತವಾಗಿದೆ. ಈ ಬಗ್ಗೆ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಗೃಹ ಸಚಿವರು ಕೇಂದ್ರದೊಂದಿಗೆ ಸಮಾಲೋಚನೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಲಿದ್ದಾರೆ' ಎಂದರು.</p>.<p>'ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಗಲಭೆಕೋರರಿಂದಲೇ ಭರಿಸುವ ಉತ್ತರ ಪ್ರದೇಶ ಮಾದರಿಯ ಕಾನೂನನ್ನು ರಾಜ್ಯದಲ್ಲೂ ಜಾರಿಗೆ ತರಲು ಚಿಂತನೆ ನಡೆಯುತ್ತಿದೆ. ಈ ಸಂಬಂಧ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತೀರ್ಪುಗಳೂ ಇವೆ. ಬಂದ್ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಆದರೆ ಬಂದ್ ಕರೆ ನೀಡಿದವರಿಂದಲೇ ಭರಿಸಬೇಕು ಎಂದು ನ್ಯಾಯಾಲಯಗಳು ಹೇಳಿವೆ' ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<p><br />'ಕೇಂದ್ರದ ಆದೇಶಕ್ಕೆ ಕಾಯುತ್ತಿದ್ದೇವೆ. ಆಗಸ್ಟ್ 31ರವರೆಗೆ ಶಾಲಾಕಾಲೇಜುಗಳನ್ನುಬ ತೆರೆಯಲು ಅವಕಾಶ ಇಲ್ಲ. ಕೇಂದ್ರ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಆ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುತ್ತೇವೆ' ಎಂದು ಸುರೇಶ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಬೆಂಗಳೂರಿನ ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಎಸ್ಡಿಪಿಐ ಪಾತ್ರ ಬಹಳಷ್ಟಿದೆ. ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂಬ ಕೂಗು ಬಲವಾಗಿ ಕೇಳಿಬರುತ್ತಿದ್ದು, ನನ್ನ ಅಭಿಪ್ರಾಯವೂ ಇದೆ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದರು.</p>.<p>ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಗಲಭೆಯಲ್ಲಿ ಎಸ್ಡಿಪಿಐ ಪಾತ್ರದ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ನಿಷೇಧದ ಬಗ್ಗೆ ಕೇಳಿಬರುತ್ತಿರುವ ಬೇಡಿಕೆ ಸರ್ವ ಸಮ್ಮತವಾಗಿದೆ. ಈ ಬಗ್ಗೆ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಗೃಹ ಸಚಿವರು ಕೇಂದ್ರದೊಂದಿಗೆ ಸಮಾಲೋಚನೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಲಿದ್ದಾರೆ' ಎಂದರು.</p>.<p>'ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಗಲಭೆಕೋರರಿಂದಲೇ ಭರಿಸುವ ಉತ್ತರ ಪ್ರದೇಶ ಮಾದರಿಯ ಕಾನೂನನ್ನು ರಾಜ್ಯದಲ್ಲೂ ಜಾರಿಗೆ ತರಲು ಚಿಂತನೆ ನಡೆಯುತ್ತಿದೆ. ಈ ಸಂಬಂಧ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತೀರ್ಪುಗಳೂ ಇವೆ. ಬಂದ್ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಆದರೆ ಬಂದ್ ಕರೆ ನೀಡಿದವರಿಂದಲೇ ಭರಿಸಬೇಕು ಎಂದು ನ್ಯಾಯಾಲಯಗಳು ಹೇಳಿವೆ' ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<p><br />'ಕೇಂದ್ರದ ಆದೇಶಕ್ಕೆ ಕಾಯುತ್ತಿದ್ದೇವೆ. ಆಗಸ್ಟ್ 31ರವರೆಗೆ ಶಾಲಾಕಾಲೇಜುಗಳನ್ನುಬ ತೆರೆಯಲು ಅವಕಾಶ ಇಲ್ಲ. ಕೇಂದ್ರ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಆ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುತ್ತೇವೆ' ಎಂದು ಸುರೇಶ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>