<p><strong>ನವದೆಹಲಿ:</strong> ಭದ್ರತಾ ವೈಫಲ್ಯದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಇದರ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಹೇಳಿಕೆಗಳನ್ನು ಗಮನಿಸಿದರೆ ಶಾ ವೈಫಲ್ಯ ಎದ್ದು ಕಾಣುತ್ತದೆ. ಪ್ರಧಾನಿಗೆ ಬೆದರಿಕೆ ಇದೆ ಎಂದರೆ ಶಾ ಅವರು ಸಚಿವ ಸ್ಥಾನದಲ್ಲಿ ಒಂದು ಗಳಿಗೆ ಕೂಡ ಇರಲು ಅರ್ಹರಲ್ಲ‘ ಎಂದರು. </p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುಕ್ಕಲುತನ. ಅದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಅವರು 14 ವರ್ಷಗಳಿಂದ ಪತ್ರಿಕಾಗೋಷ್ಠಿ ನಡೆಸಿಲ್ಲ. ಈಗ ಅವರ ಮತ್ತೊಂದು ಪುಕ್ಕಲುತನ ಅನಾವರಣಗೊಂಡಿದೆ. ಬಿಜೆಪಿಯವರು ಹೇಡಿಗಳು‘ ಎಂದು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭದ್ರತಾ ವೈಫಲ್ಯದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಇದರ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಹೇಳಿಕೆಗಳನ್ನು ಗಮನಿಸಿದರೆ ಶಾ ವೈಫಲ್ಯ ಎದ್ದು ಕಾಣುತ್ತದೆ. ಪ್ರಧಾನಿಗೆ ಬೆದರಿಕೆ ಇದೆ ಎಂದರೆ ಶಾ ಅವರು ಸಚಿವ ಸ್ಥಾನದಲ್ಲಿ ಒಂದು ಗಳಿಗೆ ಕೂಡ ಇರಲು ಅರ್ಹರಲ್ಲ‘ ಎಂದರು. </p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುಕ್ಕಲುತನ. ಅದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಅವರು 14 ವರ್ಷಗಳಿಂದ ಪತ್ರಿಕಾಗೋಷ್ಠಿ ನಡೆಸಿಲ್ಲ. ಈಗ ಅವರ ಮತ್ತೊಂದು ಪುಕ್ಕಲುತನ ಅನಾವರಣಗೊಂಡಿದೆ. ಬಿಜೆಪಿಯವರು ಹೇಡಿಗಳು‘ ಎಂದು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>