<p><strong>ಬೆಂಗಳೂರು: </strong>ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದ್ದು, ಕ್ಷೇತ್ರದಲ್ಲಿ ಭದ್ರತಾ ಪಡೆಗಳು ಸೋಮವಾರ ಪಥಸಂಚಲನ ನಡೆಸಿದವು.</p>.<p>ಪಶ್ಚಿಮ ಹಾಗೂ ಉತ್ತರ ವಿಭಾಗ ವ್ಯಾಪ್ತಿಯಲ್ಲಿ ಕ್ಷೇತ್ರವಿದ್ದು, ನಗರದ ಪೊಲೀಸರ ನಿತ್ಯವೂ ಗಸ್ತು ತಿರುಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ಅರೆಸೇನಾ ಪಡೆ ತುಕಡಿಗಳನ್ನು ನಗರಕ್ಕೆ ಕರೆಸಲಾಗಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ ಪೊಲೀಸರೂ ಭದ್ರತೆಗಾಗಿ ನಗರಕ್ಕೆ ಬಂದಿದ್ದಾರೆ.</p>.<p>ಎಲ್ಲ ಭದ್ರತಾ ಪಡೆಗಳು ಕ್ಷೇತ್ರದ ಬಹುತೇಕ ಪ್ರದೇಶಗಳಲ್ಲಿ ಪಥಸಂಚಲನ ಮಾಡಿದರು. ತುಕಡಿ ವಾಹನಗಳು ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿ ಪಥಸಂಚಲನದಲ್ಲಿ ಇದ್ದರು.</p>.<p>‘ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಅಲ್ಲೆಲ್ಲ ಭದ್ರತೆಗೆ ಒತ್ತು ನೀಡಲಾಗಿದ್ದು, ಪ್ರತಿಯೊಂದು ಸ್ಥಳಗಳ ಮೇಲೂ ಕಣ್ಣಿಡಲಾಗಿದೆ’ ಎಂದು ಪಶ್ಚಿವ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದ್ದು, ಕ್ಷೇತ್ರದಲ್ಲಿ ಭದ್ರತಾ ಪಡೆಗಳು ಸೋಮವಾರ ಪಥಸಂಚಲನ ನಡೆಸಿದವು.</p>.<p>ಪಶ್ಚಿಮ ಹಾಗೂ ಉತ್ತರ ವಿಭಾಗ ವ್ಯಾಪ್ತಿಯಲ್ಲಿ ಕ್ಷೇತ್ರವಿದ್ದು, ನಗರದ ಪೊಲೀಸರ ನಿತ್ಯವೂ ಗಸ್ತು ತಿರುಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ಅರೆಸೇನಾ ಪಡೆ ತುಕಡಿಗಳನ್ನು ನಗರಕ್ಕೆ ಕರೆಸಲಾಗಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ ಪೊಲೀಸರೂ ಭದ್ರತೆಗಾಗಿ ನಗರಕ್ಕೆ ಬಂದಿದ್ದಾರೆ.</p>.<p>ಎಲ್ಲ ಭದ್ರತಾ ಪಡೆಗಳು ಕ್ಷೇತ್ರದ ಬಹುತೇಕ ಪ್ರದೇಶಗಳಲ್ಲಿ ಪಥಸಂಚಲನ ಮಾಡಿದರು. ತುಕಡಿ ವಾಹನಗಳು ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿ ಪಥಸಂಚಲನದಲ್ಲಿ ಇದ್ದರು.</p>.<p>‘ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಅಲ್ಲೆಲ್ಲ ಭದ್ರತೆಗೆ ಒತ್ತು ನೀಡಲಾಗಿದ್ದು, ಪ್ರತಿಯೊಂದು ಸ್ಥಳಗಳ ಮೇಲೂ ಕಣ್ಣಿಡಲಾಗಿದೆ’ ಎಂದು ಪಶ್ಚಿವ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>