ಇದರಿಂದ ಆರು ಜನ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಮಿಕರು ಕಾರ್ಖಾನೆಯ ಕಚೇರಿ ಕಿಟಕಿಗಳ ಗಾಜುಗಳನ್ನು ಜಖಂಗೊಳಿಸಿದರು. ಅಲ್ಲದೆ ಸರ್ಕಾರಿ ಬಸ್ವೊಂದಕ್ಕೆ ಕಲ್ಲು ಎಸೆದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 30 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.