‘ಅಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ರೂಪಾಯಿ ಹಣ ವೆಚ್ಚ ಮಾಡಲಾಗಿದೆ. ಇದಕ್ಕೆ ಅಕ್ರಮ ಹಣ ಬಳಕೆ ಮಾಡಲಾಗಿದೆ. ಈ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯಬೇಕು. ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರುಹೇಳಿಕೆ ನೀಡಿದ್ದಾರೆ.ಅನರ್ಹ ಶಾಸಕರು ಬಿಜೆಪಿ ಸೇರಿದ ಕೂಡಲೇ ಮಂತ್ರಿಗಳಾಗುತ್ತಾರೆ ಎಂದೂ ಹೇಳಿದ್ದಾರೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು’ ಎಂದು ಬಾಲನ್ ಆರೋಪಿಸಿದ್ದಾರೆ.