<p><strong>ಬೆಂಗಳೂರು:</strong> ರಾಜ್ಯದ ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳು ಅರ್ಧ ವೃತ್ತಾಕಾರದಲ್ಲಿ ಕುಳಿತು ಶಿಕ್ಷಣ ಪಡೆಯುವ ವ್ಯವಸ್ಥೆ ಜಾರಿ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಜಿ. ರಾವ್ ಮನವಿ ಮಾಡಿದ್ದಾರೆ.</p>.<p>ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಅವರು, ‘ಕೇರಳದಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಲಾಗಿದೆ. ಈ ಪದ್ಧತಿಯಿಂದ ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಮುಖವನ್ನು ಸುಲಭವಾಗಿ ನೋಡಬಹುದು. ಇದರಿಂದ ವಿದ್ಯಾರ್ಥಿಗಳ ಮುಖಭಾವ, ಆಸಕ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಗಮನಿಸಲು ಸಾಧ್ಯವಾಗುತ್ತದೆ. ಶಿಕ್ಷಕರಿಗೆ ಪ್ರತಿಯೊಬ್ಬರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಲು ಅನುಕೂಲವಾಗುತ್ತದೆ’ ಎಂದಿದ್ದಾರೆ.</p>.<p>‘ಚರ್ಚೆ, ಗುಂಪು ಕೆಲಸ, ಪ್ರಾತ್ಯಕ್ಷಿಕೆ, ದೃಶ್ಯ-ಶ್ರವಣ ಸಾಧನಗಳ ಬಳಕೆ ಮುಂತಾದ ವಿವಿಧ ಕಲಿಕಾ ಶೈಲಿಗಳಿಗೆ ಪದ್ಧತಿ ಸೂಕ್ತವಾಗಿದೆ. ಶಿಕ್ಷಕರಿಗೆ ತಮ್ಮ ಬೋಧನಾ ವಿಧಾನವನ್ನು ವೈವಿಧ್ಯಗೊಳಿಸಲು ಅವಕಾಶ ನೀಡುತ್ತದೆ. ಕೇರಳದ ಶಾಲೆಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಂಡ ನಂತರ, ವಿದ್ಯಾರ್ಥಿಗಳ ಕಲಿಕೆಯ ಫಲಿತಾಂಶಗಳು, ಸಾಮಾಜಿಕ ಕೌಶಲ ಮತ್ತು ತರಗತಿಯ ವಾತಾವರಣದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳು ಅರ್ಧ ವೃತ್ತಾಕಾರದಲ್ಲಿ ಕುಳಿತು ಶಿಕ್ಷಣ ಪಡೆಯುವ ವ್ಯವಸ್ಥೆ ಜಾರಿ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಜಿ. ರಾವ್ ಮನವಿ ಮಾಡಿದ್ದಾರೆ.</p>.<p>ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಅವರು, ‘ಕೇರಳದಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಲಾಗಿದೆ. ಈ ಪದ್ಧತಿಯಿಂದ ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಮುಖವನ್ನು ಸುಲಭವಾಗಿ ನೋಡಬಹುದು. ಇದರಿಂದ ವಿದ್ಯಾರ್ಥಿಗಳ ಮುಖಭಾವ, ಆಸಕ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಗಮನಿಸಲು ಸಾಧ್ಯವಾಗುತ್ತದೆ. ಶಿಕ್ಷಕರಿಗೆ ಪ್ರತಿಯೊಬ್ಬರೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಲು ಅನುಕೂಲವಾಗುತ್ತದೆ’ ಎಂದಿದ್ದಾರೆ.</p>.<p>‘ಚರ್ಚೆ, ಗುಂಪು ಕೆಲಸ, ಪ್ರಾತ್ಯಕ್ಷಿಕೆ, ದೃಶ್ಯ-ಶ್ರವಣ ಸಾಧನಗಳ ಬಳಕೆ ಮುಂತಾದ ವಿವಿಧ ಕಲಿಕಾ ಶೈಲಿಗಳಿಗೆ ಪದ್ಧತಿ ಸೂಕ್ತವಾಗಿದೆ. ಶಿಕ್ಷಕರಿಗೆ ತಮ್ಮ ಬೋಧನಾ ವಿಧಾನವನ್ನು ವೈವಿಧ್ಯಗೊಳಿಸಲು ಅವಕಾಶ ನೀಡುತ್ತದೆ. ಕೇರಳದ ಶಾಲೆಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಂಡ ನಂತರ, ವಿದ್ಯಾರ್ಥಿಗಳ ಕಲಿಕೆಯ ಫಲಿತಾಂಶಗಳು, ಸಾಮಾಜಿಕ ಕೌಶಲ ಮತ್ತು ತರಗತಿಯ ವಾತಾವರಣದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>