ಕುಲಪತಿ ಎಂ.ಎಸ್. ಜಯಕರ ಮಾತನಾಡಿ, ರಾಜ್ಯ ಶಿಕ್ಷಣ ನೀತಿ ರಾಜ್ಯದ ಶಿಕ್ಷಣ ವ್ಯವಸ್ಥೆಯ ದೀರ್ಘಾವಧಿ ಸವಾಲುಗಳನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಶೈಕ್ಷಣಿಕ ಅಭಿವೃದ್ಧಿ ಜತೆಗೆ, ವಿಶಾಲ ಮನೋಭಾವ, ಸಮಾನ ದೃಷ್ಟಿಕೋನ ಬೆಳೆಸಲು ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳ ಕೌಶಲ ಹೆಚ್ಚಿಸುವ ಮೂಲಕ ಉದ್ಯೋಗಾವಕಾಶ ದೊರಕಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.