‘ಕೊರಟಗೆರೆ ತಾಲ್ಲೂಕಿನಲ್ಲಿ ಈಚೆಗೆ ಮಗುವಿನ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಪ್ರಕರಣ ಬೇಸರ ತರಿಸಿದೆ. ಈ ಘಟನೆಯ ಬಳಿಕ ಪ್ರತ್ಯೇಕ ಸ್ಮಶಾನ ಅಗತ್ಯವೆಂದು ನನಗೆ ಅನಿಸಿತು. ಘಟನಾ ಸ್ಥಳಕ್ಕೆ ತೆರಳಿ ದಾಖಲೆ ಪರಿಶೀಲಿಸಿದ್ದು, ಅದು ಅಲೆಮಾರಿ (ದೊಂಬಿದಾಸ) ಕುಟುಂಬ ಎಂಬುದು ಗೊತ್ತಾಗಿದೆ. ಆದರೆ, ಜಾತಿ ಪ್ರಮಾಣಪತ್ರದಲ್ಲಿ ಅಲೆಮಾರಿ ಎಂದು ನಮೂದಾಗಿಲ್ಲ. ಆ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.