<p><strong>ಬೆಂಗಳೂರು</strong>: ‘ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಈ ಸಂಬಂಧ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಉದ್ಯಮಿ ಶ್ರೀಶೈಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಈ ಪ್ರಕರಣದಲ್ಲಿ ಉದ್ದೇಶಿತ ಭೂಮಿಯು ಪುರಸಭೆ ವ್ಯಾಪ್ತಿಯಲ್ಲಿದ್ದು ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಯಮಗಳು ಅನ್ವಯವಾಗುವುದಿಲ್ಲ. ಆದ್ದರಿಂದ, ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿ‘ ಎಂದು ಪುರಸಭೆಗೆ ನಿರ್ದೇಶಿಸಿದೆ. </p>.<p>ಪ್ರಕರಣವೇನು?: ಅರ್ಜಿದಾರರು ಪಿತ್ರಾರ್ಜಿತ ಆಸ್ತಿಯಲ್ಲಿ 1.29 ಎಕರೆ ಜಮೀನಿನ ವಾರಸುದಾರರು. ಈ ಜಮೀನನ್ನು ಅವರು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಕೃಷಿಯೇತರ ಚಟುವಟಿಕೆಗಳ ಬಳಕೆ ಅನುಮತಿ ನೀಡಿದ್ದರು.</p>.<p>ಅರ್ಜಿದಾರರು ಈ ಪರಿವರ್ತಿತ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡದ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆ ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಈ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲ ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ಈ ಸಂಬಂಧ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಉದ್ಯಮಿ ಶ್ರೀಶೈಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಈ ಪ್ರಕರಣದಲ್ಲಿ ಉದ್ದೇಶಿತ ಭೂಮಿಯು ಪುರಸಭೆ ವ್ಯಾಪ್ತಿಯಲ್ಲಿದ್ದು ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಯಮಗಳು ಅನ್ವಯವಾಗುವುದಿಲ್ಲ. ಆದ್ದರಿಂದ, ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿ‘ ಎಂದು ಪುರಸಭೆಗೆ ನಿರ್ದೇಶಿಸಿದೆ. </p>.<p>ಪ್ರಕರಣವೇನು?: ಅರ್ಜಿದಾರರು ಪಿತ್ರಾರ್ಜಿತ ಆಸ್ತಿಯಲ್ಲಿ 1.29 ಎಕರೆ ಜಮೀನಿನ ವಾರಸುದಾರರು. ಈ ಜಮೀನನ್ನು ಅವರು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಕೃಷಿಯೇತರ ಚಟುವಟಿಕೆಗಳ ಬಳಕೆ ಅನುಮತಿ ನೀಡಿದ್ದರು.</p>.<p>ಅರ್ಜಿದಾರರು ಈ ಪರಿವರ್ತಿತ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡದ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆ ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಈ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲ ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>