<p>ಬೆಳಗಾವಿಯ ಸುವರ್ಣ ವಿಧಾನಸೌಧನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತರಗಳ ವಿವರ ಇಲ್ಲಿದೆ.</p>.<h2><strong>ವಿಧಾನಪರಿಷತ್</strong></h2><p><strong>ಕನ್ನಡ ಫಲಕಕ್ಕೆ ಕಣ್ಗಾವಲು ವಾಹನ</strong></p><p>ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಕಣ್ಗಾವಲು ವಾಹನ ನಿಯೋಜಿಸಲಾಗುವುದು. ಕನ್ನಡದಲ್ಲಿ ನಾಮಫಲಕ ಅಳವಡಿಸದ ಸಂಘ–ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯ ಅನ್ವಯ ₹5,000ರಿಂದ ₹10,000 ದಂಡ ವಿಧಿಸಲಾಗುವುದು. ಎರಡು ಅವಕಾಶಗಳ ನಂತರವೂ ಅಳವಡಿಸಿಕೊಳ್ಳದಿದ್ದರೆ ಪ್ರತಿ ತಪಾಸಣೆಯ ವೇಳೆ ₹20,000 ದಂಡ ವಸೂಲಿ ಮಾಡಲಾಗುವುದು. ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ</p><p><em><strong>ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ (ಪ್ರಶ್ನೆ: ಕಾಂಗ್ರೆಸ್ನ ಉಮಾಶ್ರೀ)</strong></em></p><p><strong>ಗ್ರಂಥಾಲಯ ಮೇಲ್ವಿಚಾರಕರ ಖಾತೆಗೆ ಹಣ</strong></p><p>ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಪ್ರತಿ ತಿಂಗಳು ನೇರ ನಗದು ಪಾವತಿ ವ್ಯವಸ್ಥೆಯ ಮೂಲಕ ಗೌರವಧನ ಪಾವತಿಸಲಾಗುವುದು. ಪ್ರತಿ ಗ್ರಂಥಪಾಲಕರಿಗೆ ₹16,382 ನಿಗದಿ ಮಾಡಿದೆ. ಸರ್ಕಾರ ನೇರವಾಗಿ ₹12,000 ನೀಡುತ್ತಿದ್ದು, ಉಳಿದ ಮೊತ್ತವನ್ನು ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರಹವಾಗುವ ಗ್ರಂಥಾಲಯ ಕರದಲ್ಲಿ ಭರಿಸಲು ಸೂಚಿಸಲಾಗಿದೆ. ಪ್ರತಿ ತಿಂಗಳು ಹಣ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು</p><p><em><strong>ಗ್ರಾಮೀಣಾಭಿವದ್ಧಿ ಸಚಿವ ಪ್ರಿಯಾಂಕ್ ಖರ್ಗೆ (ಪ್ರಶ್ನೆ: ಬಿಜೆಪಿಯ ಡಿ.ಎಸ್.ಅರುಣ್)</strong></em></p>.<h2><strong>ವಿಧಾನಸಭೆ</strong></h2><p><strong>ಗ್ರಾಮಗಳನ್ನು ಕೈಬಿಡುವುದು ಕಷ್ಟದ ಕೆಲಸ</strong></p><p>ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾ ನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನೂ ಸೇರಿಸಿ ಗಡಿ ನಿಗದಿಪಡಿಸಲಾಗುತ್ತಿದೆ. ಆದರೆ, ಕೆಲವು ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಿದ್ದಾರೆ. ಇದು ಕಷ್ಟದ ಕೆಲಸ</p><p><em><strong>–ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವ (ಪ್ರಶ್ನೆ ಬಿಜೆಪಿಯ ದಿನಕರ ಶೆಟ್ಟಿ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿಯ ಸುವರ್ಣ ವಿಧಾನಸೌಧನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತರಗಳ ವಿವರ ಇಲ್ಲಿದೆ.</p>.<h2><strong>ವಿಧಾನಪರಿಷತ್</strong></h2><p><strong>ಕನ್ನಡ ಫಲಕಕ್ಕೆ ಕಣ್ಗಾವಲು ವಾಹನ</strong></p><p>ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಕಣ್ಗಾವಲು ವಾಹನ ನಿಯೋಜಿಸಲಾಗುವುದು. ಕನ್ನಡದಲ್ಲಿ ನಾಮಫಲಕ ಅಳವಡಿಸದ ಸಂಘ–ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯ ಅನ್ವಯ ₹5,000ರಿಂದ ₹10,000 ದಂಡ ವಿಧಿಸಲಾಗುವುದು. ಎರಡು ಅವಕಾಶಗಳ ನಂತರವೂ ಅಳವಡಿಸಿಕೊಳ್ಳದಿದ್ದರೆ ಪ್ರತಿ ತಪಾಸಣೆಯ ವೇಳೆ ₹20,000 ದಂಡ ವಸೂಲಿ ಮಾಡಲಾಗುವುದು. ಈ ಕುರಿತು ಎಲ್ಲ ಜಿಲ್ಲಾಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ</p><p><em><strong>ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ (ಪ್ರಶ್ನೆ: ಕಾಂಗ್ರೆಸ್ನ ಉಮಾಶ್ರೀ)</strong></em></p><p><strong>ಗ್ರಂಥಾಲಯ ಮೇಲ್ವಿಚಾರಕರ ಖಾತೆಗೆ ಹಣ</strong></p><p>ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಪ್ರತಿ ತಿಂಗಳು ನೇರ ನಗದು ಪಾವತಿ ವ್ಯವಸ್ಥೆಯ ಮೂಲಕ ಗೌರವಧನ ಪಾವತಿಸಲಾಗುವುದು. ಪ್ರತಿ ಗ್ರಂಥಪಾಲಕರಿಗೆ ₹16,382 ನಿಗದಿ ಮಾಡಿದೆ. ಸರ್ಕಾರ ನೇರವಾಗಿ ₹12,000 ನೀಡುತ್ತಿದ್ದು, ಉಳಿದ ಮೊತ್ತವನ್ನು ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರಹವಾಗುವ ಗ್ರಂಥಾಲಯ ಕರದಲ್ಲಿ ಭರಿಸಲು ಸೂಚಿಸಲಾಗಿದೆ. ಪ್ರತಿ ತಿಂಗಳು ಹಣ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು</p><p><em><strong>ಗ್ರಾಮೀಣಾಭಿವದ್ಧಿ ಸಚಿವ ಪ್ರಿಯಾಂಕ್ ಖರ್ಗೆ (ಪ್ರಶ್ನೆ: ಬಿಜೆಪಿಯ ಡಿ.ಎಸ್.ಅರುಣ್)</strong></em></p>.<h2><strong>ವಿಧಾನಸಭೆ</strong></h2><p><strong>ಗ್ರಾಮಗಳನ್ನು ಕೈಬಿಡುವುದು ಕಷ್ಟದ ಕೆಲಸ</strong></p><p>ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾ ನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನೂ ಸೇರಿಸಿ ಗಡಿ ನಿಗದಿಪಡಿಸಲಾಗುತ್ತಿದೆ. ಆದರೆ, ಕೆಲವು ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಿದ್ದಾರೆ. ಇದು ಕಷ್ಟದ ಕೆಲಸ</p><p><em><strong>–ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವ (ಪ್ರಶ್ನೆ ಬಿಜೆಪಿಯ ದಿನಕರ ಶೆಟ್ಟಿ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>