<p><strong>ಬೆಂಗಳೂರು</strong>: ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಕೆಲವು ಸಚಿವರು ಎದ್ದು ನಿಂತು ಅಡ್ಡಿಪಡಿಸಿ, ಗದ್ದಲ ಸೃಷ್ಟಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಬಿಜೆಪಿ ಸದಸ್ಯರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ಬೆಳಗಾವಿ ಅಧಿವೇಶನವೂ ಸೇರಿ ಕಳೆದ ವರ್ಷ ನಡೆದ ಅಧಿವೇಶನಗಳಲ್ಲಿ ಕೆಲವು ಸಚಿವರು ಉತ್ತರ ನೀಡುವುದಕ್ಕಿಂತ ವಿರೋಧ ಪಕ್ಷಗಳ ಸದಸ್ಯರ ಮಾತಿಗೆ ಅಡ್ಡಿಪಡಿಸುವುದಕ್ಕೆ ಸಮಯ ವ್ಯರ್ಥಮಾಡಿದ್ದರು. ಇದು ಒಳ್ಳೆಯ ಲಕ್ಷಣವಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ವಿ.ಸುನಿಲ್ಕುಮಾರ್ ಸಭಾಧ್ಯಕ್ಷರಿಗೆ ತಿಳಿಸಿದರು. ಈ ಬಗ್ಗೆ ಗಮನಹರಿಸುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದರು’ ಎಂದು ಮೂಲಗಳು ಹೇಳಿವೆ.</p>.<p>ಅಲ್ಲದೇ, ಕಲಾಪದ ವೇಳೆ ಮಹತ್ವ ಚರ್ಚೆ ನಡೆಯುತ್ತಿರುವಾದ ವಿರೋಧ ಪಕ್ಷಗಳ ಸದಸ್ಯರು ಮಾತನಾಡುವುದನ್ನು ಕ್ಯಾಮೆರಾದಲ್ಲಿ ತೋರಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗುತ್ತಿದೆ. ವಿಡಿಯೊ ನಿರ್ವಹಣೆ ಮಾಡುವವರನ್ನು ಬದಲಾಯಿಸಬೇಕು ಎಂದೂ ಅವರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಖಾದರ್, ಈ ಬಾರಿ ವಾರ್ತಾ ಇಲಾಖೆಯವರಿಗೇ ನೀಡುವುದಾಗಿ ಭರವಸೆ ನೀಡಿದರು.</p>.<p>ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ‘ಶಾಸಕರ ವೇತನ ಮತ್ತು ಭತ್ಯೆಗಳ ಏರಿಕೆ ಮಾಡುವುದಕ್ಕೆ ಒಂದು ಆಯೋಗ ರಚಿಸುವುದು ಸೂಕ್ತ. ನಮ್ಮ ವೇತನ ನಾವೇ ಏರಿಸಿಕೊಳ್ಳುವುದು ಸರಿಯಲ್ಲ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಕೆಲವು ಸಚಿವರು ಎದ್ದು ನಿಂತು ಅಡ್ಡಿಪಡಿಸಿ, ಗದ್ದಲ ಸೃಷ್ಟಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಬಿಜೆಪಿ ಸದಸ್ಯರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ಬೆಳಗಾವಿ ಅಧಿವೇಶನವೂ ಸೇರಿ ಕಳೆದ ವರ್ಷ ನಡೆದ ಅಧಿವೇಶನಗಳಲ್ಲಿ ಕೆಲವು ಸಚಿವರು ಉತ್ತರ ನೀಡುವುದಕ್ಕಿಂತ ವಿರೋಧ ಪಕ್ಷಗಳ ಸದಸ್ಯರ ಮಾತಿಗೆ ಅಡ್ಡಿಪಡಿಸುವುದಕ್ಕೆ ಸಮಯ ವ್ಯರ್ಥಮಾಡಿದ್ದರು. ಇದು ಒಳ್ಳೆಯ ಲಕ್ಷಣವಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ವಿ.ಸುನಿಲ್ಕುಮಾರ್ ಸಭಾಧ್ಯಕ್ಷರಿಗೆ ತಿಳಿಸಿದರು. ಈ ಬಗ್ಗೆ ಗಮನಹರಿಸುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದರು’ ಎಂದು ಮೂಲಗಳು ಹೇಳಿವೆ.</p>.<p>ಅಲ್ಲದೇ, ಕಲಾಪದ ವೇಳೆ ಮಹತ್ವ ಚರ್ಚೆ ನಡೆಯುತ್ತಿರುವಾದ ವಿರೋಧ ಪಕ್ಷಗಳ ಸದಸ್ಯರು ಮಾತನಾಡುವುದನ್ನು ಕ್ಯಾಮೆರಾದಲ್ಲಿ ತೋರಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗುತ್ತಿದೆ. ವಿಡಿಯೊ ನಿರ್ವಹಣೆ ಮಾಡುವವರನ್ನು ಬದಲಾಯಿಸಬೇಕು ಎಂದೂ ಅವರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಖಾದರ್, ಈ ಬಾರಿ ವಾರ್ತಾ ಇಲಾಖೆಯವರಿಗೇ ನೀಡುವುದಾಗಿ ಭರವಸೆ ನೀಡಿದರು.</p>.<p>ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ‘ಶಾಸಕರ ವೇತನ ಮತ್ತು ಭತ್ಯೆಗಳ ಏರಿಕೆ ಮಾಡುವುದಕ್ಕೆ ಒಂದು ಆಯೋಗ ರಚಿಸುವುದು ಸೂಕ್ತ. ನಮ್ಮ ವೇತನ ನಾವೇ ಏರಿಸಿಕೊಳ್ಳುವುದು ಸರಿಯಲ್ಲ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>