<p><strong>ಬೆಂಗಳೂರು</strong>: ಎಲ್ಲ ಗುತ್ತಿಗೆದಾರರಿಗೂ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ನಿರಾಧಾರ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಇಲಾಖೆಯ ಆಡಳಿತದಲ್ಲಿ ಯಾರದೂ ಹಸ್ತಕ್ಷೇಪ ಇಲ್ಲ. ಕೆರೆಗಳ ಆಧುನೀಕರಣದಲ್ಲಿ ₹10 ಲಕ್ಷದವರೆಗಿನ ಕಾಮಗಾರಿಗಳಿಗೆ, ಪಿಕ್ಅಪ್ ಅಣೆಕಟ್ಟೆಗಳ ಕಾಮಗಾರಿಗಳಿಗೆ ₹15 ಲಕ್ಷದವರೆಗೆ ಪೂರ್ಣ ಹಣ ಬಿಡುಗಡೆ ಮಾಡಲಾಗಿದೆ. ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಸಣ್ಣ ಗುತ್ತಿಗೆದಾರರಿಗೂ ಹಣ ನೀಡಲಾಗಿದೆ. ಹೆಚ್ಚಿನ ಹಣ ಬಾಕಿ ಇರುವ ಗುತ್ತಿಗೆದಾರರನ್ನು ಆದ್ಯತೆಯ ಮೇಲೆ ಪರಿಗಣಿಸಲಾಗಿದೆ. ಎರಡು ವರ್ಷಗಳಲ್ಲಿ 1,566 ಗುತ್ತಿಗೆದಾರರ ಬಾಕಿ ಇತ್ಯರ್ಥ ಮಾಡಲಾಗಿದೆ ಎಂದರು.</p>.<p>ರಾಜ್ಯ ಗುತ್ತಿಗೆದಾರರ ಸಂಘ ಆಧಾರ ರಹಿತ ಆರೋಪ ಮಾಡಿದೆ. ಸಂಘದ ಮುಖಂಡರ ಜತೆ ಸಭೆ ನಡೆಸಿ, ಗೊಂದಲಗಳನ್ನು ಪರಿಹರಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಇಲ್ಲದಿದ್ದರೂ, ಅವೈಜ್ಞಾನಿಕವಾಗಿ ಅನುಮೋದನೆ ನೀಡಲಾಗಿದ್ದ ₹12,693 ಕೋಟಿ ಮೊತ್ತದ ಒಟ್ಟು 15,549 ಕಾಮಗಾರಿ ಮುಂದುವರಿಸಲಾಗಿದೆ. 2000 ಗುತ್ತಿಗೆದಾರರಲ್ಲಿ, 639 ಗುತ್ತಿಗೆದಾರರ ಸಂಪೂರ್ಣ ಹಣವನ್ನು ಬಿಡುಗೆಡೆ ಮಾಡಲಾಗಿದೆ. 1,361 ಗುತ್ತಿಗೆದಾರರಿಗೆ ಭಾಗಶಃ ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಲ್ಲ ಗುತ್ತಿಗೆದಾರರಿಗೂ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ನಿರಾಧಾರ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಇಲಾಖೆಯ ಆಡಳಿತದಲ್ಲಿ ಯಾರದೂ ಹಸ್ತಕ್ಷೇಪ ಇಲ್ಲ. ಕೆರೆಗಳ ಆಧುನೀಕರಣದಲ್ಲಿ ₹10 ಲಕ್ಷದವರೆಗಿನ ಕಾಮಗಾರಿಗಳಿಗೆ, ಪಿಕ್ಅಪ್ ಅಣೆಕಟ್ಟೆಗಳ ಕಾಮಗಾರಿಗಳಿಗೆ ₹15 ಲಕ್ಷದವರೆಗೆ ಪೂರ್ಣ ಹಣ ಬಿಡುಗಡೆ ಮಾಡಲಾಗಿದೆ. ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಸಣ್ಣ ಗುತ್ತಿಗೆದಾರರಿಗೂ ಹಣ ನೀಡಲಾಗಿದೆ. ಹೆಚ್ಚಿನ ಹಣ ಬಾಕಿ ಇರುವ ಗುತ್ತಿಗೆದಾರರನ್ನು ಆದ್ಯತೆಯ ಮೇಲೆ ಪರಿಗಣಿಸಲಾಗಿದೆ. ಎರಡು ವರ್ಷಗಳಲ್ಲಿ 1,566 ಗುತ್ತಿಗೆದಾರರ ಬಾಕಿ ಇತ್ಯರ್ಥ ಮಾಡಲಾಗಿದೆ ಎಂದರು.</p>.<p>ರಾಜ್ಯ ಗುತ್ತಿಗೆದಾರರ ಸಂಘ ಆಧಾರ ರಹಿತ ಆರೋಪ ಮಾಡಿದೆ. ಸಂಘದ ಮುಖಂಡರ ಜತೆ ಸಭೆ ನಡೆಸಿ, ಗೊಂದಲಗಳನ್ನು ಪರಿಹರಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಇಲ್ಲದಿದ್ದರೂ, ಅವೈಜ್ಞಾನಿಕವಾಗಿ ಅನುಮೋದನೆ ನೀಡಲಾಗಿದ್ದ ₹12,693 ಕೋಟಿ ಮೊತ್ತದ ಒಟ್ಟು 15,549 ಕಾಮಗಾರಿ ಮುಂದುವರಿಸಲಾಗಿದೆ. 2000 ಗುತ್ತಿಗೆದಾರರಲ್ಲಿ, 639 ಗುತ್ತಿಗೆದಾರರ ಸಂಪೂರ್ಣ ಹಣವನ್ನು ಬಿಡುಗೆಡೆ ಮಾಡಲಾಗಿದೆ. 1,361 ಗುತ್ತಿಗೆದಾರರಿಗೆ ಭಾಗಶಃ ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>