<p><strong>ಬೆಂಗಳೂರು:</strong> ‘ಸಂತ ಸೇವಾಲಾಲ್ ಅವರ ಜನ್ಮಸ್ಥಳ ಸೂರಗೊಂಡನ ಕೊಪ್ಪ ಗ್ರಾಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು,₹180 ಕೋಟಿ ವೆಚ್ಚದಲ್ಲಿ ಯೋಜನೆಯೊಂದನ್ನು ರೂಪಿಸಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಅವರ 280ನೇ ಜಯಂತ್ಯುತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸುವರ್ಣ ಗ್ರಾಮ ಯೋಜನೆಯ ಮಾದರಿಯಲ್ಲಿಯೇ ಈ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಅನುಮತಿ ದೊರೆತಿದ್ದು,ಈಗಾಗಲೇ ₹15 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಬಂಜಾರ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಯಿಂದ ಹೊರತೆಗೆಯುವ ಕುರಿತು ಸುಳ್ಳು ಸುದ್ದಿಗಳು ಹರಡುತ್ತಿರುವುದರ ಬಗ್ಗೆ ಯಾರೂ ಕಿವಿಗೊಡಬೇಡಿ. ನಾನು ಅಧಿಕಾರದಲ್ಲಿ ಇದ್ದರೂ, ಇರದಿದ್ದರೂ ಇದಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಯಾವುದೇ ಸಂಶಯ ಬೇಡ’ ಎಂದರು.</p>.<p>‘ಸೇವಾಲಾಲ್ ಸಾಂಸ್ಕೃತಿಕ ಕೇಂದ್ರ ಯೋಜನೆ ಅಡಿಯಲ್ಲಿ₹10 ಲಕ್ಷ ಅನುದಾನ ನೀಡಲಾಗುತ್ತಿದೆ. 400 ತಾಂಡಾಗಳು ಇದರ ಸದುಪಯೋಗ ಪಡೆದುಕೊಳ್ಳಲಿವೆ. ಐರಾವತ, ಸಮೃದ್ಧಿಯಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಮುದಾಯ ಮುನ್ನೆಲೆಗೆ ಬರಬೇಕು’ ಎಂದು ಸಮಾಜ ಬಾಂಧವರಿಗೆ ಸಲಹೆ ಮಾಡಿದರು.</p>.<p>ಸಾಹಿತಿ ಬಿ.ಟಿ.ಲಲಿತಾ ನಾಯಕ್, ‘ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ನಮ್ಮ ಜನಾಂಗದ ನಾಯಕರಿಗೆ ಕಾಂಗ್ರೆಸ್ ಪಕ್ಷ ಪ್ರಾತಿನಿಧ್ಯವನ್ನು ನೀಡಬೇಕು. ಸಮುದಾಯದ ವಲಸಿಗರಿಗೆ ನೆರವಾಗುವ ಸೂಕ್ತ ಯೋಜನೆಯನ್ನು ಜಾರಿಗೊಳಿಸಬೇಕು. ಸೇವಾಲಾಲ್ ಅವರ ಹೆಸರಿನಲ್ಲಿ ಕಂಡಕಂಡವರು ಹಣ ವಸೂಲಿ ಮಾಡುತ್ತಿರುವ ಪರಿಪಾಠವನ್ನು ತಪ್ಪಿಸಬೇಕು’ ಎಂದು ಕೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಮಾತನಾಡಿ, ‘ಕೆಪಿಸಿಸಿಯಲ್ಲಿ ನಮ್ಮ ಸಮುದಾಯದ ಪ್ರತಿನಿಧಿಗಳಿಗೆ ಸದಸ್ಯತ್ವ ನೀಡಬೇಕು. ಈ ಬಗ್ಗೆ ಸಮಾಜ ಕಲ್ಯಾಣ ಸಚಿವರು ಸರ್ಕಾರವನ್ನು ಒತ್ತಾಯಿಸಿ, ನಮ್ಮ ಬೇಡಿಕೆಯನ್ನು ಈಡೇರಿಸಬೇಕು’ ಎಂದು ಹೇಳಿದರು.</p>.<p>ಸಂತ ಸೇವಾಲಾಲ್ ಅವರ ಕುರಿತ ವಿಶೇಷಾಂಕವನ್ನು ಬಿಡುಗಡೆ ಮಾಡಲಾಯಿತು. ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಿ.ಬಿ.ನಾಯಕ ಅವರು ಸೇವಾಲಾಲ್ ಅವರ ಕುರಿತು ಉಪ್ಯಾಸ ನೀಡಿದರು.‘ರುದ್ರಿಬಾಯಿ’ ಚಲನಚಿತ್ರದ ಆಡಿಯೊ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಂತ ಸೇವಾಲಾಲ್ ಅವರ ಜನ್ಮಸ್ಥಳ ಸೂರಗೊಂಡನ ಕೊಪ್ಪ ಗ್ರಾಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು,₹180 ಕೋಟಿ ವೆಚ್ಚದಲ್ಲಿ ಯೋಜನೆಯೊಂದನ್ನು ರೂಪಿಸಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಅವರ 280ನೇ ಜಯಂತ್ಯುತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸುವರ್ಣ ಗ್ರಾಮ ಯೋಜನೆಯ ಮಾದರಿಯಲ್ಲಿಯೇ ಈ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಅನುಮತಿ ದೊರೆತಿದ್ದು,ಈಗಾಗಲೇ ₹15 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಬಂಜಾರ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಯಿಂದ ಹೊರತೆಗೆಯುವ ಕುರಿತು ಸುಳ್ಳು ಸುದ್ದಿಗಳು ಹರಡುತ್ತಿರುವುದರ ಬಗ್ಗೆ ಯಾರೂ ಕಿವಿಗೊಡಬೇಡಿ. ನಾನು ಅಧಿಕಾರದಲ್ಲಿ ಇದ್ದರೂ, ಇರದಿದ್ದರೂ ಇದಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಯಾವುದೇ ಸಂಶಯ ಬೇಡ’ ಎಂದರು.</p>.<p>‘ಸೇವಾಲಾಲ್ ಸಾಂಸ್ಕೃತಿಕ ಕೇಂದ್ರ ಯೋಜನೆ ಅಡಿಯಲ್ಲಿ₹10 ಲಕ್ಷ ಅನುದಾನ ನೀಡಲಾಗುತ್ತಿದೆ. 400 ತಾಂಡಾಗಳು ಇದರ ಸದುಪಯೋಗ ಪಡೆದುಕೊಳ್ಳಲಿವೆ. ಐರಾವತ, ಸಮೃದ್ಧಿಯಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಮುದಾಯ ಮುನ್ನೆಲೆಗೆ ಬರಬೇಕು’ ಎಂದು ಸಮಾಜ ಬಾಂಧವರಿಗೆ ಸಲಹೆ ಮಾಡಿದರು.</p>.<p>ಸಾಹಿತಿ ಬಿ.ಟಿ.ಲಲಿತಾ ನಾಯಕ್, ‘ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ನಮ್ಮ ಜನಾಂಗದ ನಾಯಕರಿಗೆ ಕಾಂಗ್ರೆಸ್ ಪಕ್ಷ ಪ್ರಾತಿನಿಧ್ಯವನ್ನು ನೀಡಬೇಕು. ಸಮುದಾಯದ ವಲಸಿಗರಿಗೆ ನೆರವಾಗುವ ಸೂಕ್ತ ಯೋಜನೆಯನ್ನು ಜಾರಿಗೊಳಿಸಬೇಕು. ಸೇವಾಲಾಲ್ ಅವರ ಹೆಸರಿನಲ್ಲಿ ಕಂಡಕಂಡವರು ಹಣ ವಸೂಲಿ ಮಾಡುತ್ತಿರುವ ಪರಿಪಾಠವನ್ನು ತಪ್ಪಿಸಬೇಕು’ ಎಂದು ಕೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಮಾತನಾಡಿ, ‘ಕೆಪಿಸಿಸಿಯಲ್ಲಿ ನಮ್ಮ ಸಮುದಾಯದ ಪ್ರತಿನಿಧಿಗಳಿಗೆ ಸದಸ್ಯತ್ವ ನೀಡಬೇಕು. ಈ ಬಗ್ಗೆ ಸಮಾಜ ಕಲ್ಯಾಣ ಸಚಿವರು ಸರ್ಕಾರವನ್ನು ಒತ್ತಾಯಿಸಿ, ನಮ್ಮ ಬೇಡಿಕೆಯನ್ನು ಈಡೇರಿಸಬೇಕು’ ಎಂದು ಹೇಳಿದರು.</p>.<p>ಸಂತ ಸೇವಾಲಾಲ್ ಅವರ ಕುರಿತ ವಿಶೇಷಾಂಕವನ್ನು ಬಿಡುಗಡೆ ಮಾಡಲಾಯಿತು. ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಿ.ಬಿ.ನಾಯಕ ಅವರು ಸೇವಾಲಾಲ್ ಅವರ ಕುರಿತು ಉಪ್ಯಾಸ ನೀಡಿದರು.‘ರುದ್ರಿಬಾಯಿ’ ಚಲನಚಿತ್ರದ ಆಡಿಯೊ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>