ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿ ಅಲ್ಲಿಂದ ಕೃಷ್ಣ ಮಠದವರೆಗೆ ನಡೆಯುವ ಶೋಭಾಯಾತ್ರೆಯಲ್ಲಿ ಉಡುಪಿಯ ಕೃಷ್ಣಮಠಕ್ಕೆ ಸಂಬಂಧಿಸಿದ ಎಲ್ಲ ಅಷ್ಟ ಮಠಗಳ ಮಠಾಧೀಶರು ಪಾಲ್ಗೊಳ್ಳುವುದು ವಾಡಿಕೆ. ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಅವರನ್ನು ಶೋಭಾಯಾತ್ರೆಯಲ್ಲಿ ಕರೆತರುವುದು ಸಂಪ್ರದಾಯ. ಆದರೆ, ಯಾತ್ರೆಯಲ್ಲಿ ಪುತ್ತಿಗೆ ಶ್ರೀ ಮತ್ತು ಅವರ ಕಿರಿಯ ಶ್ರೀ ಮಾತ್ರ ಇದ್ದರು.