<p><strong>ಬೆಂಗಳೂರು</strong>: ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.</p>.<p>ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಸದನದಲ್ಲಿ ಸಿಡಿ ವಿಚಾರದ ಬಗ್ಗೆ ಚರ್ಚಿಸುವಾಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಆ ಕಾರಣ ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ' ಎಂದು ತಿಳಿಸಿದೆ.</p>.<p><a href="https://www.prajavani.net/karnataka-news/sex-cd-case-karnataka-high-court-ramesh-jarkiholi-bengaluru-sit-police-criminal-procedure-bjp-819504.html" target="_blank"><strong>ಇದನ್ನೂ ಓದಿ-ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಜಾರಕಿಹೊಳಿಗೆ ಕೋವಿಡ್ ದೃಢ ಎಂದ ಭೈರತಿ</strong></a></p>.<p>'ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ' ಎಂದು ಬಿಜೆಪಿ ಟ್ವೀಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.</p>.<p>ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಸದನದಲ್ಲಿ ಸಿಡಿ ವಿಚಾರದ ಬಗ್ಗೆ ಚರ್ಚಿಸುವಾಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಆ ಕಾರಣ ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ' ಎಂದು ತಿಳಿಸಿದೆ.</p>.<p><a href="https://www.prajavani.net/karnataka-news/sex-cd-case-karnataka-high-court-ramesh-jarkiholi-bengaluru-sit-police-criminal-procedure-bjp-819504.html" target="_blank"><strong>ಇದನ್ನೂ ಓದಿ-ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಜಾರಕಿಹೊಳಿಗೆ ಕೋವಿಡ್ ದೃಢ ಎಂದ ಭೈರತಿ</strong></a></p>.<p>'ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ' ಎಂದು ಬಿಜೆಪಿ ಟ್ವೀಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>