ಪ್ರಜ್ವಲ್, ಜರ್ಮನಿಯ ಮ್ಯೂನಿಕ್ ನಗರದಿಂದ ಬೆಂಗಳೂರಿಗೆ ಬುಧವಾರ ಮಧ್ಯಾಹ್ನ ಹೊರಟಿದ್ದು, ವಿಮಾನದ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ಲಭಿಸಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿತ್ತು. ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ನಿಗಾ ವಹಿಸಿದ್ದರು. ಆದರೆ, ಜರ್ಮನಿಯಿಂದ ಬುಧವಾರ ಮಧ್ಯಾಹ್ನ ಹೊರಟ ವಿಮಾನದಲ್ಲಿ ಪ್ರಜ್ವಲ್ ಪ್ರಯಾಣಿಸಿಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್ಐಟಿಗೆ ಲಭಿಸಿತು.
ಈ ಹಿಂದೆಯೂ ಎರಡು ಬಾರಿ ವಿಮಾನ ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ಕೊನೆಕ್ಷಣದಲ್ಲಿ ರದ್ದುಪಡಿಸಿದ್ದರು.