‘ನಾನು ವಿಶ್ವಗುರು ಎಂದು ಮೋದಿ ಹೇಳಿಕೊಳ್ಳುತ್ತಿದ್ದಾರಲ್ಲ, ವಿಶ್ವದಲ್ಲಿ ಎಲ್ಲೇ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಪತ್ತೆ ಮಾಡಲಿ. ಮೋದಿಯವರ ಬಳಿ ಸಿಬಿಐ, ಇ.ಡಿ, ಐ.ಟಿ ಮುಂತಾದ ಏಜೆನ್ಸಿಗಳಿವೆಯಲ್ಲ. ಮಾಂಗಲ್ಯ ಕಿತ್ತವರನ್ನು ರಕ್ಷಣೆ ಮಾಡಲು ಈ ಏಜೆನ್ಸಿಗಳಿವೆಯೇ? ಮಹಿಳೆಯರ ಮಾಂಗಲ್ಯ ಕಿತ್ತ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರಲ್ಲ. ಈ ಹಗರಣದ ಬಗ್ಗೆ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲವಲ್ಲ. ನಿಮಗೆ ನಾಚಿಗೆ ಆಗುವುದಿಲ್ಲವೇ’ ಎಂದೂ ಪ್ರಶ್ನಿಸಿದರು.