<p><strong>ಬೆಂಗಳೂರು:</strong> ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ‘ಶಾದಿಭಾಗ್ಯ’ಕ್ಕೆ (ಬಿದಾಯಿ ಯೋಜನೆ) ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅನುದಾನ ಕಡಿತ ಮಾಡಿದೆ.</p>.<p>ಇದೇ ಫೆಬ್ರುವರಿಯಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ನಲ್ಲಿ ₹ 125 ಕೋಟಿ ಅನುದಾನ ಮೀಸಲಿಟ್ಟಿದ್ದರು. ಜುಲೈನಲ್ಲಿ ಮಂಡನೆಯಾಗಿರುವ ‘ದೋಸ್ತಿ’ ಬಜೆಟ್ನಲ್ಲಿ ₹ 55 ಕೋಟಿ ನೀಡಲಾಗಿದೆ.</p>.<p>‘23,592 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಹೊಸದಾಗಿ 10 ಸಾವಿರ ಅರ್ಜಿಗಳು ಸಲ್ಲಿಕೆಯಾಗುವ ಅಂದಾಜಿದ್ದು, ₹ 120 ಕೋಟಿ ನೀಡಬೇಕು ಎಂದು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಹಣಕಾಸು ಸಚಿವರೂ ಆಗಿರುವ ಕುಮಾರಸ್ವಾಮಿ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು’ ಎಂದು ಅಲ್ಪಸಂಖ್ಯಾತ ಇಲಾಖೆ ಮೂಲಗಳು ತಿಳಿಸಿವೆ.</p>.<p class="Subhead">ಏನಿದು ಯೋಜನೆ: 2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಬಡ ಹೆಣ್ಣುಮಕ್ಕಳ ವಿವಾಹಕ್ಕೆ ತಲಾ ₹50 ಸಾವಿರ ನೆರವು ನೀಡುವ ‘ಶಾದಿ ಭಾಗ್ಯ’ ಯೋಜನೆ ಆರಂಭಿಸಿದ್ದರು.</p>.<p>‘ಶಾದಿಭಾಗ್ಯ’ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತಿದ್ದ ಸರ್ಕಾರ, ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಕ್ಕಳು, ವಿಧವೆಯರು, ವಿಚ್ಛೇದಿತರಿಗೂ ಈ ಯೋಜನೆಯನ್ನು ವಿಸ್ತರಿಸಿತ್ತು. ಈಗ ಅನುದಾನ ಕಡಿತ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.</p>.<p><strong>ಅಂಕಿ ಅಂಶ</strong></p>.<p>₹ 330 ಕೋಟಿ</p>.<p>2013ರಿಂದ 2018ರವರೆಗೆ ಮಾಡಿರುವ ವೆಚ್ಚ</p>.<p>₹125 ಕೋಟಿ</p>.<p>ಸಿದ್ದರಾಮಯ್ಯ ಹಂಚಿಕೆ ಮಾಡಿದ್ದ ಅನುದಾನ</p>.<p>₹55 ಕೋಟಿ</p>.<p>ಕುಮಾರಸ್ವಾಮಿ ಹಂಚಿಕೆ ಮಾಡಿರುವ ಅನುದಾನ</p>.<p>* ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡಲು ಹೆಚ್ಚು ಹಣ ಅಗತ್ಯ. ಸರ್ಕಾರ ಅನುದಾನ ಬಿಡುಗಡೆ ಮಾಡುವ ನಿರೀಕ್ಷೆ ಇದೆ</p>.<p><em><strong>-ಅಕ್ರಂ ಪಾಶಾ, ನಿರ್ದೇಶಕ, ಅಲ್ಪಸಂಖ್ಯಾತ ಇಲಾಖೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ‘ಶಾದಿಭಾಗ್ಯ’ಕ್ಕೆ (ಬಿದಾಯಿ ಯೋಜನೆ) ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅನುದಾನ ಕಡಿತ ಮಾಡಿದೆ.</p>.<p>ಇದೇ ಫೆಬ್ರುವರಿಯಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ನಲ್ಲಿ ₹ 125 ಕೋಟಿ ಅನುದಾನ ಮೀಸಲಿಟ್ಟಿದ್ದರು. ಜುಲೈನಲ್ಲಿ ಮಂಡನೆಯಾಗಿರುವ ‘ದೋಸ್ತಿ’ ಬಜೆಟ್ನಲ್ಲಿ ₹ 55 ಕೋಟಿ ನೀಡಲಾಗಿದೆ.</p>.<p>‘23,592 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಹೊಸದಾಗಿ 10 ಸಾವಿರ ಅರ್ಜಿಗಳು ಸಲ್ಲಿಕೆಯಾಗುವ ಅಂದಾಜಿದ್ದು, ₹ 120 ಕೋಟಿ ನೀಡಬೇಕು ಎಂದು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಹಣಕಾಸು ಸಚಿವರೂ ಆಗಿರುವ ಕುಮಾರಸ್ವಾಮಿ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು’ ಎಂದು ಅಲ್ಪಸಂಖ್ಯಾತ ಇಲಾಖೆ ಮೂಲಗಳು ತಿಳಿಸಿವೆ.</p>.<p class="Subhead">ಏನಿದು ಯೋಜನೆ: 2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಬಡ ಹೆಣ್ಣುಮಕ್ಕಳ ವಿವಾಹಕ್ಕೆ ತಲಾ ₹50 ಸಾವಿರ ನೆರವು ನೀಡುವ ‘ಶಾದಿ ಭಾಗ್ಯ’ ಯೋಜನೆ ಆರಂಭಿಸಿದ್ದರು.</p>.<p>‘ಶಾದಿಭಾಗ್ಯ’ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತಿದ್ದ ಸರ್ಕಾರ, ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಕ್ಕಳು, ವಿಧವೆಯರು, ವಿಚ್ಛೇದಿತರಿಗೂ ಈ ಯೋಜನೆಯನ್ನು ವಿಸ್ತರಿಸಿತ್ತು. ಈಗ ಅನುದಾನ ಕಡಿತ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.</p>.<p><strong>ಅಂಕಿ ಅಂಶ</strong></p>.<p>₹ 330 ಕೋಟಿ</p>.<p>2013ರಿಂದ 2018ರವರೆಗೆ ಮಾಡಿರುವ ವೆಚ್ಚ</p>.<p>₹125 ಕೋಟಿ</p>.<p>ಸಿದ್ದರಾಮಯ್ಯ ಹಂಚಿಕೆ ಮಾಡಿದ್ದ ಅನುದಾನ</p>.<p>₹55 ಕೋಟಿ</p>.<p>ಕುಮಾರಸ್ವಾಮಿ ಹಂಚಿಕೆ ಮಾಡಿರುವ ಅನುದಾನ</p>.<p>* ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡಲು ಹೆಚ್ಚು ಹಣ ಅಗತ್ಯ. ಸರ್ಕಾರ ಅನುದಾನ ಬಿಡುಗಡೆ ಮಾಡುವ ನಿರೀಕ್ಷೆ ಇದೆ</p>.<p><em><strong>-ಅಕ್ರಂ ಪಾಶಾ, ನಿರ್ದೇಶಕ, ಅಲ್ಪಸಂಖ್ಯಾತ ಇಲಾಖೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>