<p><strong>ಬೆಂಗಳೂರು</strong>: ‘ಶಾದಿಭಾಗ್ಯ ಯೋಜನೆಗೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ₹55 ಕೋಟಿ ಅನುದಾನವನ್ನು ಮುಂದುವರಿಸಿದ್ದೇನೆ ವಿನಾ ಅನುದಾನ ಕಡಿತ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ತಪ್ಪು ಮಾಡದ ನನ್ನ ಮೇಲೆ ವಿನಾಕರಣ ತಪ್ಪು ಆರೋಪ ಹೊರಿಸುವ ಪ್ರಯತ್ನ ನಡೆಯುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದ ಕಾರಣದಿಂದಲೇ ದೇವರ ಅನುಗ್ರಹದಿಂದ ಈ ಸ್ಥಾನ ಸಿಕ್ಕಿದೆ. ಯಾವುದೇ ಮುಖ್ಯಮಂತ್ರಿ ಸಾಮಾನ್ಯ ಜನರೊಂದಿಗೆ ಬೆರೆಯುವುದಿಲ್ಲ. ಆದರೆ, ನಾನು ಯಾವುದೇ ಜಾತಿ ಭೇದವಿಲ್ಲದೇ ಎಲ್ಲಾ ವರ್ಗದ ಜನರೊಂದಿಗೆ ಬೆರೆಯುತ್ತೇನೆ’ ಎಂದರು.</p>.<p>‘ಶಾದಿ ಭಾಗ್ಯಕ್ಕೆ ಅನುದಾನ ಕಡಿತ’ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ‘ಅನುದಾನ ಕಡಿತ ಮಾಡಿರಲಿಕ್ಕಿಲ್ಲ. ರೈತರ ಸಾಲಮನ್ನಾ ಮಾಡಲು ಬೃಹತ್ ಮೊತ್ತದ ಸಂಪನ್ಮೂಲ ಬೇಕು. ಅದಕ್ಕಾಗಿ ಮರು ಹೊಂದಾಣಿಕೆ ಮಾಡಿರಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಾದಿಭಾಗ್ಯ ಯೋಜನೆಗೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ₹55 ಕೋಟಿ ಅನುದಾನವನ್ನು ಮುಂದುವರಿಸಿದ್ದೇನೆ ವಿನಾ ಅನುದಾನ ಕಡಿತ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ತಪ್ಪು ಮಾಡದ ನನ್ನ ಮೇಲೆ ವಿನಾಕರಣ ತಪ್ಪು ಆರೋಪ ಹೊರಿಸುವ ಪ್ರಯತ್ನ ನಡೆಯುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದ ಕಾರಣದಿಂದಲೇ ದೇವರ ಅನುಗ್ರಹದಿಂದ ಈ ಸ್ಥಾನ ಸಿಕ್ಕಿದೆ. ಯಾವುದೇ ಮುಖ್ಯಮಂತ್ರಿ ಸಾಮಾನ್ಯ ಜನರೊಂದಿಗೆ ಬೆರೆಯುವುದಿಲ್ಲ. ಆದರೆ, ನಾನು ಯಾವುದೇ ಜಾತಿ ಭೇದವಿಲ್ಲದೇ ಎಲ್ಲಾ ವರ್ಗದ ಜನರೊಂದಿಗೆ ಬೆರೆಯುತ್ತೇನೆ’ ಎಂದರು.</p>.<p>‘ಶಾದಿ ಭಾಗ್ಯಕ್ಕೆ ಅನುದಾನ ಕಡಿತ’ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ‘ಅನುದಾನ ಕಡಿತ ಮಾಡಿರಲಿಕ್ಕಿಲ್ಲ. ರೈತರ ಸಾಲಮನ್ನಾ ಮಾಡಲು ಬೃಹತ್ ಮೊತ್ತದ ಸಂಪನ್ಮೂಲ ಬೇಕು. ಅದಕ್ಕಾಗಿ ಮರು ಹೊಂದಾಣಿಕೆ ಮಾಡಿರಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>