<p><strong>ಬೆಂಗಳೂರು:</strong> ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಶಕ್ತಿ’ ಯೋಜನೆ ಜಾರಿಯಾಗಿ ಒಂದೂವರೆ ತಿಂಗಳು ಕಳೆದಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. </p><p>ಶಕ್ತಿ ಯೋಜನೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಶಕ್ತಿ ಯೋಜನೆಯಿಂದಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ದೇವಾಲಯಗಳ ಆದಾಯ ಹೆಚ್ಚಾಗಿದೆ, ಜನರ ಭಕ್ತಿಗೆ ಪುಷ್ಠಿ ಸಿಕ್ಕಿದೆ ಎಂದು ಕೊಂಡಾಡಿದೆ. </p><p>ಆರ್ಥಿಕತೆಯ ಚಲನಶೀಲತೆಯ ಬಗ್ಗೆ ಅರಿವಿಲ್ಲದ ಬಿಜೆಪಿಗರು ನಡೆಸಿದ ‘ಪಾಕಿಸ್ತಾನ, ಶ್ರೀಲಂಕಾ’ ಎಂಬ ಅಪಪ್ರಚಾರಕ್ಕೆ ಉತ್ತರವೂ ಸಿಕ್ಕಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. </p><p>‘ಎಷ್ಟೋ ದಿನಗಳಿಂದ ತಮ್ಮ ನೆಚ್ಚಿನ ದೇವಾಲಯಗಳ ಭೇಟಿಗೆ ಕಾಯುತ್ತಿದ್ದ ಜನರು ಶಕ್ತಿ ಯೋಜನೆಯ ಲಾಭ ಪಡೆದು ದೇವರ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳುವಂತೆ ನಮ್ಮ ಸರ್ಕಾರಕ್ಕೆ ಜನತೆ ಹರಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಹೇಳಿದೆ.</p><p>ಜನರ ಧಾರ್ಮಿಕ ನಂಬಿಕೆಗಳಿಗೆ ಉತ್ತೇಜಿಸಿದ ಸಾರ್ಥಕತೆ ನಮಗಿದೆ, ಆದರೆ ಸೋಕಾಲ್ಡ್ ಧರ್ಮ ರಕ್ಷಕರಾದ ಬಿಜೆಪಿಗರು ಮಾಡಿದ್ದೇನು ಎನ್ನುವುದನ್ನು ಉತ್ತರಿಸಬಲ್ಲರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದಾರೆ.</p><p><strong>ಓದಿ... <a href="https://www.prajavani.net/news/india-news/40-times-more-talk-of-good-things-happening-in-india-than-discussion-on-bad-things-mohan-bhagwat-2403871">ದೇಶದಲ್ಲಿ ಕೆಟ್ಟ ವಿಷಯಕ್ಕಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಷಯಗಳ ಚರ್ಚೆ: ಮೋಹನ್ ಭಾಗವತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಶಕ್ತಿ’ ಯೋಜನೆ ಜಾರಿಯಾಗಿ ಒಂದೂವರೆ ತಿಂಗಳು ಕಳೆದಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. </p><p>ಶಕ್ತಿ ಯೋಜನೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಶಕ್ತಿ ಯೋಜನೆಯಿಂದಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ದೇವಾಲಯಗಳ ಆದಾಯ ಹೆಚ್ಚಾಗಿದೆ, ಜನರ ಭಕ್ತಿಗೆ ಪುಷ್ಠಿ ಸಿಕ್ಕಿದೆ ಎಂದು ಕೊಂಡಾಡಿದೆ. </p><p>ಆರ್ಥಿಕತೆಯ ಚಲನಶೀಲತೆಯ ಬಗ್ಗೆ ಅರಿವಿಲ್ಲದ ಬಿಜೆಪಿಗರು ನಡೆಸಿದ ‘ಪಾಕಿಸ್ತಾನ, ಶ್ರೀಲಂಕಾ’ ಎಂಬ ಅಪಪ್ರಚಾರಕ್ಕೆ ಉತ್ತರವೂ ಸಿಕ್ಕಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. </p><p>‘ಎಷ್ಟೋ ದಿನಗಳಿಂದ ತಮ್ಮ ನೆಚ್ಚಿನ ದೇವಾಲಯಗಳ ಭೇಟಿಗೆ ಕಾಯುತ್ತಿದ್ದ ಜನರು ಶಕ್ತಿ ಯೋಜನೆಯ ಲಾಭ ಪಡೆದು ದೇವರ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳುವಂತೆ ನಮ್ಮ ಸರ್ಕಾರಕ್ಕೆ ಜನತೆ ಹರಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಹೇಳಿದೆ.</p><p>ಜನರ ಧಾರ್ಮಿಕ ನಂಬಿಕೆಗಳಿಗೆ ಉತ್ತೇಜಿಸಿದ ಸಾರ್ಥಕತೆ ನಮಗಿದೆ, ಆದರೆ ಸೋಕಾಲ್ಡ್ ಧರ್ಮ ರಕ್ಷಕರಾದ ಬಿಜೆಪಿಗರು ಮಾಡಿದ್ದೇನು ಎನ್ನುವುದನ್ನು ಉತ್ತರಿಸಬಲ್ಲರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದಾರೆ.</p><p><strong>ಓದಿ... <a href="https://www.prajavani.net/news/india-news/40-times-more-talk-of-good-things-happening-in-india-than-discussion-on-bad-things-mohan-bhagwat-2403871">ದೇಶದಲ್ಲಿ ಕೆಟ್ಟ ವಿಷಯಕ್ಕಿಂತ 40 ಪಟ್ಟು ಹೆಚ್ಚು ಒಳ್ಳೆಯ ವಿಷಯಗಳ ಚರ್ಚೆ: ಮೋಹನ್ ಭಾಗವತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>