ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಕೆಪಿಎಸ್ಸಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದ ಆರೋಪಗಳು ಬಂದಿದ್ದವು. ಈಗ ಮಾನವ ಹಕ್ಕುಗಳ ಆಯೋಗಕ್ಕೆ ನೇಮಿಸಲಾಗಿದೆ. ರಾಜ್ಯದ ಯಾವ ಜನರ ಮಾನವ ಹಕ್ಕುಗಳನ್ನು ಇವರು ರಕ್ಷಿಸುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇವರನ್ನು ನೇಮಕ ಮಾಡುವ ಮುಖೇನ, ಸಿದ್ದರಾಮಯ್ಯ ತಾವು ಭ್ರಷ್ಟರ ಪರ ಎಂಬ ಸಂದೇಶ ನೀಡಲು ಹೊರಟಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.