<p><strong>ದಾವಣಗೆರೆ</strong>: ‘ಯಾವ ಸಮುದಾಯದ ಅಧಿಕಾರಿಗಳನ್ನು ಎಲ್ಲೆಲ್ಲಿ ನಿಯೋಜಿಸಿದ್ದಾರೆ ಎಂಬ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಒಬ್ಬರನ್ನೂ ಜಿಲ್ಲಾಧಿಕಾರಿಯಾಗಿ ನೇಮಿಸಿಲ್ಲ. ಈ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p><p>‘ವೀರಶೈವ ಲಿಂಗಾಯತ ಸಮುದಾಯದ ಏಳು ಜನರಿಗೆ ಸಚಿವ ಸ್ಥಾನ ನೀಡಿದ್ದಾರೆ. ಅದರ ಬಗ್ಗೆ ನಮ್ಮ ತಕರಾರು ಇಲ್ಲ. ಸಮುದಾಯದ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯ ಆಗಿರುವುದು ಸತ್ಯ. ಅವರಿಗೆ ಪ್ರಮುಖ ಹುದ್ದೆಗಳನ್ನು (ಕೀ ಪೋಸ್ಟ್) ನೀಡಿಲ್ಲ. ಅದಕ್ಕೆಂದೇ ಈ ವಿಷಯದ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಆಗುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ನಾನು ಎಚ್.ವಿಶ್ವನಾಥ್ ತರಹ ಯಾರಿಗೋ ಬೆಣ್ಣೆ ಹಚ್ಚಿ, ಮಸ್ಕಾ ಹೊಡೆದು ಎಂಎಲ್ಸಿ ಆಗಿಲ್ಲ. 7 ಸಲ ಜನರಿಂದ ಆಯ್ಕೆಯಾಗಿ ಶಾಸಕನಾಗಿರುವೆ. ನಾನು ಮಾತನಾಡಿದ್ದು, ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಬಗ್ಗೆ. ಸಚಿವ ಸ್ಥಾನದ ಬಗ್ಗೆ ಹೇಳಿಕೆ ನೀಡಿರುವ ಅವನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ’ ಎಂದು ವಾಗ್ದಾಳಿ ನಡೆಸಿದರು.</p><p>ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ನೀಡದ್ದರಿಂದ, ಅವರ ಪಾಡು ನಾಯಿ ಪಾಡಾಗಿದೆ ಎಂದು ಶಾಮನೂರು ಶಿವಶಂಕರಪ್ಪ ಕಳೆದ ವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೀಕಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಯಾವ ಸಮುದಾಯದ ಅಧಿಕಾರಿಗಳನ್ನು ಎಲ್ಲೆಲ್ಲಿ ನಿಯೋಜಿಸಿದ್ದಾರೆ ಎಂಬ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಒಬ್ಬರನ್ನೂ ಜಿಲ್ಲಾಧಿಕಾರಿಯಾಗಿ ನೇಮಿಸಿಲ್ಲ. ಈ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p><p>‘ವೀರಶೈವ ಲಿಂಗಾಯತ ಸಮುದಾಯದ ಏಳು ಜನರಿಗೆ ಸಚಿವ ಸ್ಥಾನ ನೀಡಿದ್ದಾರೆ. ಅದರ ಬಗ್ಗೆ ನಮ್ಮ ತಕರಾರು ಇಲ್ಲ. ಸಮುದಾಯದ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯ ಆಗಿರುವುದು ಸತ್ಯ. ಅವರಿಗೆ ಪ್ರಮುಖ ಹುದ್ದೆಗಳನ್ನು (ಕೀ ಪೋಸ್ಟ್) ನೀಡಿಲ್ಲ. ಅದಕ್ಕೆಂದೇ ಈ ವಿಷಯದ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಆಗುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ನಾನು ಎಚ್.ವಿಶ್ವನಾಥ್ ತರಹ ಯಾರಿಗೋ ಬೆಣ್ಣೆ ಹಚ್ಚಿ, ಮಸ್ಕಾ ಹೊಡೆದು ಎಂಎಲ್ಸಿ ಆಗಿಲ್ಲ. 7 ಸಲ ಜನರಿಂದ ಆಯ್ಕೆಯಾಗಿ ಶಾಸಕನಾಗಿರುವೆ. ನಾನು ಮಾತನಾಡಿದ್ದು, ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಬಗ್ಗೆ. ಸಚಿವ ಸ್ಥಾನದ ಬಗ್ಗೆ ಹೇಳಿಕೆ ನೀಡಿರುವ ಅವನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ’ ಎಂದು ವಾಗ್ದಾಳಿ ನಡೆಸಿದರು.</p><p>ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ನೀಡದ್ದರಿಂದ, ಅವರ ಪಾಡು ನಾಯಿ ಪಾಡಾಗಿದೆ ಎಂದು ಶಾಮನೂರು ಶಿವಶಂಕರಪ್ಪ ಕಳೆದ ವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೀಕಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>