ಸುತ್ತೂರು ಶ್ರೀಗಳು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ಚೇತರಿಕೆಗೆ ಹಾರೈಸಿದರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ, ಮೈಸೂರಿನ ಕೃಷ್ಣಧಾಮ, ಚೆನ್ನೈ ಶ್ರೀನಗರದ ಕೃಷ್ಣ ಮಂದಿರ, ಬಾಗಲಕೋಟೆ, ರಾಮೇಶ್ಚರ, ತಿರುಮಲ ತಿರುಪತಿ, ಹುಬ್ಬಳ್ಳಿ, ಹಾಸನ, ಹರಿದ್ವಾರ, ದೆಹಲಿ ಸೇರಿದಂತೆ ಪೇಜಾವರ ಮಠದ ಶಾಖೆಗಳಲ್ಲಿ ವಿದ್ವಾಂಸರು, ಶಿಷ್ಯರು, ಭಕ್ತರು ಪ್ರಾರ್ಥನೆ ಸಲ್ಲಿಸಿದರು.