<p><strong>ಬೆಂಗಳೂರು:</strong> ಪ್ರೊ.ಕೆ.ಇ.ರಾಧಾಕೃಷ್ಣ ಅವರು ಇಂಗ್ಲಿಷ್ಗೆ ಭಾಷಾಂತರ ಮಾಡಿರುವ ‘ಮಹಾಪುರಾಣ’ ಗ್ರಂಥವನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹಕಾರದೊಂದಿಗೆ ಪಂಡಿತರತ್ನ ಎ. ಶಾಂತಿರಾಜಶಾಸ್ತ್ರಿ ಟ್ರಸ್ಟ್ ವಿದೇಶದ 100 ಪ್ರಮುಖ ಅಂತರರಾಷ್ಟ್ರೀಯ ಗ್ರಂಥಾಲಯಗಳಿಗೆ ಪೂರೈಸುತ್ತಿದೆ.</p>.<p>ಟ್ರಸ್ಟ್ ಹೊರತಂದ ಈ ಗ್ರಂಥವನ್ನು 2020ರ ಮಾ.3ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ವೀರೇಂದ್ರ ಹೆಗ್ಗಡೆ ಅವರು, ‘ಧರ್ಮದ ಸಾರವನ್ನು ಒಳಗೊಂಡಿರುವ ಈ ಗ್ರಂಥವು ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳನ್ನು ತಲುಪಬೇಕು’ ಎಂಬ ಆಶಯ ವ್ಯಕ್ತಪಡಿಸಿದ್ದರು. ಅದರಂತೆ ಈ ಗ್ರಂಥವನ್ನು ವಿದೇಶಗಳ ಗ್ರಂಥಾಲಯಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದ್ದೇವೆ. ಈ ಗ್ರಂಥವು 6 ಸಂಪುಟಗಳಲ್ಲಿ ಹೊರಬಂದಿದ್ದು, ಪ್ರತಿ ಸಂಪುಟ ತಲಾ 750 ಪುಟಗಳನ್ನು ಒಳಗೊಂಡಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>‘ಪ್ರತಿ ಸಂಪುಟಕ್ಕೆ ₹ 9 ಸಾವಿರ ದರವಿದೆ. 100 ಗ್ರಂಥಾಲಯಗಳಿಗೆ ಪೂರೈಸಲು ಒಟ್ಟು ₹ 16 ಲಕ್ಷ ವೆಚ್ಚವಾಗಲಿದೆ. ಮೊದಲ ಸೆಟ್ ಅನ್ನು ಬ್ರಿಟನ್ನ ಬ್ರಿಟಿಷ್ ಗ್ರಂಥಾಲಯಕ್ಕೆ ಕಳುಹಿಸಲಾಗುತ್ತಿದೆ. ಒಂದು ತಿಂಗಳ ಅವಧಿಯಲ್ಲಿ ಎಲ್ಲ ಗ್ರಂಥಾಲಯಗಳನ್ನು ತಲುಪಲಿವೆ’ ಎಂದು ವಿವರಿಸಿದ್ದಾರೆ.</p>.<p>‘9ನೇ ಶತಮಾನದಲ್ಲಿ ಭಗವದ್ ಜೀನಸೇನಾಚಾರ್ಯ ಮತ್ತು ಗುಣಭದ್ರಾಚಾರ್ಯರು ಸಂಸ್ಕೃತದಲ್ಲಿ ರಚಿಸಿದ ‘ಮಹಾಪುರಾಣ’ ಒಂದು ಮೇರು ಕೃತಿಯಾಗಿದ್ದು, 20 ಸಾವಿರ ಸಂಸ್ಕೃತ ಶ್ಲೋಕಗಳನ್ನು ಒಳಗೊಂಡಿದೆ. ಈ ಗ್ರಂಥವನ್ನು 1940ರಲ್ಲಿ ಮೈಸೂರಿನ ಎರ್ತೂರು ಶಾಂತಿರಾಜಶಾಸ್ತ್ರಿ ಕನ್ನಡಕ್ಕೆ ತಂದರು. ಇದು ಈಗಾಗಲೇ ನಾಲ್ಕು ಬಾರಿ ಮರು ಮುದ್ರಣ ಕಂಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರೊ.ಕೆ.ಇ.ರಾಧಾಕೃಷ್ಣ ಅವರು ಇಂಗ್ಲಿಷ್ಗೆ ಭಾಷಾಂತರ ಮಾಡಿರುವ ‘ಮಹಾಪುರಾಣ’ ಗ್ರಂಥವನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹಕಾರದೊಂದಿಗೆ ಪಂಡಿತರತ್ನ ಎ. ಶಾಂತಿರಾಜಶಾಸ್ತ್ರಿ ಟ್ರಸ್ಟ್ ವಿದೇಶದ 100 ಪ್ರಮುಖ ಅಂತರರಾಷ್ಟ್ರೀಯ ಗ್ರಂಥಾಲಯಗಳಿಗೆ ಪೂರೈಸುತ್ತಿದೆ.</p>.<p>ಟ್ರಸ್ಟ್ ಹೊರತಂದ ಈ ಗ್ರಂಥವನ್ನು 2020ರ ಮಾ.3ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ವೀರೇಂದ್ರ ಹೆಗ್ಗಡೆ ಅವರು, ‘ಧರ್ಮದ ಸಾರವನ್ನು ಒಳಗೊಂಡಿರುವ ಈ ಗ್ರಂಥವು ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳನ್ನು ತಲುಪಬೇಕು’ ಎಂಬ ಆಶಯ ವ್ಯಕ್ತಪಡಿಸಿದ್ದರು. ಅದರಂತೆ ಈ ಗ್ರಂಥವನ್ನು ವಿದೇಶಗಳ ಗ್ರಂಥಾಲಯಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದ್ದೇವೆ. ಈ ಗ್ರಂಥವು 6 ಸಂಪುಟಗಳಲ್ಲಿ ಹೊರಬಂದಿದ್ದು, ಪ್ರತಿ ಸಂಪುಟ ತಲಾ 750 ಪುಟಗಳನ್ನು ಒಳಗೊಂಡಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>‘ಪ್ರತಿ ಸಂಪುಟಕ್ಕೆ ₹ 9 ಸಾವಿರ ದರವಿದೆ. 100 ಗ್ರಂಥಾಲಯಗಳಿಗೆ ಪೂರೈಸಲು ಒಟ್ಟು ₹ 16 ಲಕ್ಷ ವೆಚ್ಚವಾಗಲಿದೆ. ಮೊದಲ ಸೆಟ್ ಅನ್ನು ಬ್ರಿಟನ್ನ ಬ್ರಿಟಿಷ್ ಗ್ರಂಥಾಲಯಕ್ಕೆ ಕಳುಹಿಸಲಾಗುತ್ತಿದೆ. ಒಂದು ತಿಂಗಳ ಅವಧಿಯಲ್ಲಿ ಎಲ್ಲ ಗ್ರಂಥಾಲಯಗಳನ್ನು ತಲುಪಲಿವೆ’ ಎಂದು ವಿವರಿಸಿದ್ದಾರೆ.</p>.<p>‘9ನೇ ಶತಮಾನದಲ್ಲಿ ಭಗವದ್ ಜೀನಸೇನಾಚಾರ್ಯ ಮತ್ತು ಗುಣಭದ್ರಾಚಾರ್ಯರು ಸಂಸ್ಕೃತದಲ್ಲಿ ರಚಿಸಿದ ‘ಮಹಾಪುರಾಣ’ ಒಂದು ಮೇರು ಕೃತಿಯಾಗಿದ್ದು, 20 ಸಾವಿರ ಸಂಸ್ಕೃತ ಶ್ಲೋಕಗಳನ್ನು ಒಳಗೊಂಡಿದೆ. ಈ ಗ್ರಂಥವನ್ನು 1940ರಲ್ಲಿ ಮೈಸೂರಿನ ಎರ್ತೂರು ಶಾಂತಿರಾಜಶಾಸ್ತ್ರಿ ಕನ್ನಡಕ್ಕೆ ತಂದರು. ಇದು ಈಗಾಗಲೇ ನಾಲ್ಕು ಬಾರಿ ಮರು ಮುದ್ರಣ ಕಂಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>