ಇದನ್ನು ಆಕ್ಷೇಪಿಸಿದ್ದ ಶರಣ್ ಪಂಪವೆಲ್, ‘ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಲಾಗಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ, ಅದನ್ನು ಬಜರಂಗದಳ ನಿಲ್ಲಿಸುತ್ತದೆ’ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ‘ಇದು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಮತ್ತು ಕೋಮುದ್ವೇಷ ಸೃಷ್ಟಿಸುವ ಪ್ರಯತ್ನ’ ಎಂಬ ಆರೋಪದಡಿ ಮಂಗಳೂರು ನಗರ ಸಿಇಎನ್ ಠಾಣಾ ಪೊಲೀಸರು ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.