ಬೆಂಗಳೂರು: 'ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ' ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.
ಮತದಾನದ ಬಳಿಕ ಮಾತನಾಡಿದ ಅವರು, 'ಚುನಾವಣೆಯಲ್ಲಿ ವಿಪ್ ಜಾರಿಗೊಳಿಸಲಾಗಿತ್ತು. ಪಕ್ಷ ಯಾವ ಅಭ್ಯರ್ಥಿಗೆಸೂಚಿಸಿತ್ತೋ ಅದೇ ಅಭ್ಯರ್ಥಿಗೆ ಮತ ಹಾಕಿದ್ದೇನೆ' ಎಂದರು.
ಈ ನಡುವೆ, ಕಾಂಗ್ರೆಸ್ ಪರ ಮತ ಚಲಾಯಿಸಿರುವುದಾಗಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಘೋಷಿಸಿದ್ದಾರೆ.
ಅಡ್ಡ ಮತದಾನ ಮಾಡಿರುವ ಸೋಮಶೇಖರ್ ಅವರ ನಡೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರ ಸದಸ್ಯತ್ವ ಅನರ್ಹತೆಗೊಳಿಸುವಂತೆ ಕೋರಿ ಸ್ಪೀಕರ್ ಗೆ ದೂರು ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರತಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.