<p><strong>ಕಲಬುರಗಿ:</strong> ಸರಳ, ಸಜ್ಜನ, ಸಂಭಾವಿತ ರಾಜಕಾರಣಿ ಎಂದೇ ಜನಜನಿತವಾಗಿರುವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ.</p><p>ಡಾ.ಶರಣಪ್ರಕಾಶ ಪಾಟೀಲ ಅವರು 1967ರ ಏಪ್ರಿಲ್ 20ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಉಡಗಿಯಲ್ಲಿ ಜನಿಸಿದರು. ಅವರ ತಂದೆ ರುದ್ರಪ್ಪ ಪಾಟೀಲ. ತಾಯಿ ಮಾಲಕಮ್ಮ ಪಾಟೀಲ.</p><p>ಎಂಬಿಬಿಎಸ್ ಓದಿರುವ ಡಾ.ಶರಣಪ್ರಕಾಶ ಅವರು ಡರ್ಮಾಟಾಲಜಿಯಲ್ಲಿ ಎಂಡಿ ಸ್ನಾತಕೋತ್ತರ ಮುಗಿಸಿದ್ದಾರೆ. ರೋಗಿಗಳ ಸೇವೆಗಿಂತಲೂ ಅವರನ್ನು ಆಕರ್ಷಿಸಿದ್ದು ಸಮಾಜಸೇವೆ. ಅವರು ವಿದ್ಯಾರ್ಥಿ ದಿನಗಳಲ್ಲೇ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಮೂಲಕ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಬಡಜನರ ಪರವಾದ ಅವರ ಆಶಯಗಳು ಅವರನ್ನು ರಾಜಕೀಯ ಪಥಕ್ಕೆ ಬರಲು ಕಾರಣವಾಯಿತು. ಅದಕ್ಕೆ ಅವರಿಗೆ ‘ಕೈ’ ನೆರವಾಯಿತು.</p><p>ಸೇಡಂ ತಾಲ್ಲೂಕಿನ ಮಳಖೇಡದಿಂದ ಜಿಲ್ಲಾ ಪಂಚಾಯಿತಿ ಪ್ರವೇಶಿಸಿದ ಡಾ.ಶರಣಪ್ರಕಾಶರು, ಮೊದಲ ಗೆಲುವಿನಲ್ಲೇ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪಟ್ಟ ಅಲಂಕರಿಸಿದ್ದರು.</p><p>2004ರಲ್ಲಿ ಸೇಡಂ ವಿಧಾನಸಭಾ ಮತಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ 2008, 2013 ಹಾಗೂ 2023ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.</p><p>2013ರಲ್ಲಿ ಡಾ.ಶರಣಪ್ರಕಾಶ ಪಾಟೀಲರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. 2023ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು. ಸಹಜವಾಗಿಯೇ ಮತ್ತೆ ಸಚಿವ ಸ್ಥಾನ ಒಲಿದಿತ್ತು. ಅವರು ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು.</p><p>ಇದೀಗ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲೂ ಮೊದಲ ಸುತ್ತಿನಲ್ಲೇ ಅವರು ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಸರಳ, ಸಜ್ಜನ, ಸಂಭಾವಿತ ರಾಜಕಾರಣಿ ಎಂದೇ ಜನಜನಿತವಾಗಿರುವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ.</p><p>ಡಾ.ಶರಣಪ್ರಕಾಶ ಪಾಟೀಲ ಅವರು 1967ರ ಏಪ್ರಿಲ್ 20ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಉಡಗಿಯಲ್ಲಿ ಜನಿಸಿದರು. ಅವರ ತಂದೆ ರುದ್ರಪ್ಪ ಪಾಟೀಲ. ತಾಯಿ ಮಾಲಕಮ್ಮ ಪಾಟೀಲ.</p><p>ಎಂಬಿಬಿಎಸ್ ಓದಿರುವ ಡಾ.ಶರಣಪ್ರಕಾಶ ಅವರು ಡರ್ಮಾಟಾಲಜಿಯಲ್ಲಿ ಎಂಡಿ ಸ್ನಾತಕೋತ್ತರ ಮುಗಿಸಿದ್ದಾರೆ. ರೋಗಿಗಳ ಸೇವೆಗಿಂತಲೂ ಅವರನ್ನು ಆಕರ್ಷಿಸಿದ್ದು ಸಮಾಜಸೇವೆ. ಅವರು ವಿದ್ಯಾರ್ಥಿ ದಿನಗಳಲ್ಲೇ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಮೂಲಕ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಬಡಜನರ ಪರವಾದ ಅವರ ಆಶಯಗಳು ಅವರನ್ನು ರಾಜಕೀಯ ಪಥಕ್ಕೆ ಬರಲು ಕಾರಣವಾಯಿತು. ಅದಕ್ಕೆ ಅವರಿಗೆ ‘ಕೈ’ ನೆರವಾಯಿತು.</p><p>ಸೇಡಂ ತಾಲ್ಲೂಕಿನ ಮಳಖೇಡದಿಂದ ಜಿಲ್ಲಾ ಪಂಚಾಯಿತಿ ಪ್ರವೇಶಿಸಿದ ಡಾ.ಶರಣಪ್ರಕಾಶರು, ಮೊದಲ ಗೆಲುವಿನಲ್ಲೇ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪಟ್ಟ ಅಲಂಕರಿಸಿದ್ದರು.</p><p>2004ರಲ್ಲಿ ಸೇಡಂ ವಿಧಾನಸಭಾ ಮತಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ 2008, 2013 ಹಾಗೂ 2023ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.</p><p>2013ರಲ್ಲಿ ಡಾ.ಶರಣಪ್ರಕಾಶ ಪಾಟೀಲರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. 2023ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು. ಸಹಜವಾಗಿಯೇ ಮತ್ತೆ ಸಚಿವ ಸ್ಥಾನ ಒಲಿದಿತ್ತು. ಅವರು ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು.</p><p>ಇದೀಗ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲೂ ಮೊದಲ ಸುತ್ತಿನಲ್ಲೇ ಅವರು ಸಚಿವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>