<p><strong>ಬೆಂಗಳೂರು</strong>: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇದೇ 26ರಂದು ಕಾಂಗ್ರೆಸ್ ಸೇರಲಿದ್ದಾರೆ.</p>.<p>ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.</p>.<p>ಶರತ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೆಲವು ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಸೇರ್ಪಡೆ ದಿನ ನಿಗದಿಯಾಗಿದೆ.</p>.<p>2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ಧ ಸೋಲು ಕಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಟಿ.ಬಿ ನಾಗರಾಜ್,ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದರು.</p>.<p>ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.</p>.<p>ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಶರತ್ ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇದೇ 26ರಂದು ಕಾಂಗ್ರೆಸ್ ಸೇರಲಿದ್ದಾರೆ.</p>.<p>ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.</p>.<p>ಶರತ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೆಲವು ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಸೇರ್ಪಡೆ ದಿನ ನಿಗದಿಯಾಗಿದೆ.</p>.<p>2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ಧ ಸೋಲು ಕಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಟಿ.ಬಿ ನಾಗರಾಜ್,ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದರು.</p>.<p>ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.</p>.<p>ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಶರತ್ ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>